ನ.1 ರಂದು ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ನಿಂತಿಕಲ್ಲು ಶಾಖೆಯ ಉದ್ಘಾಟನೆ

October 26, 2019
4:27 PM

ಸುಳ್ಯ:ಸುಳ್ಯತಾಲೂಕು ಗೌಡರ ಯುವ ಸೇವಾ ಸಂಘ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 12 ನೇ ಶಾಖೆ ನಿಂತಿಕಲ್ಲಿನಲ್ಲಿ ನ.1ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಖಾ ಕಚೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಇದರ ಅಧ್ಯಕ್ಷೆ ಕೆ‌.ಲಲಿತ ಜಿ.ಟಿ.ದೇವೇ ಗೌಡ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಗಣಕೀಕರಣದ ಉದ್ಘಾಟನೆಯನ್ನು ಶಾಸಕ ಎಸ್.ಅಂಗಾರ, ಭದ್ರತಾ ಕೊಠಡಿಯನ್ನು ಸಹಕಾರ ಮಹಾಮಂಡಳದ ಮಾಜಿ ಅಧ್ಯಕ್ಷ ಡಾ.ಶೇಖರ ವಿ.ಮಾಲಿ ಪಾಟೀಲ ನೆರವೇರಿಸುವರು. ಸಂಸ್ಥೆಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಥಮ ಠೇವಣಿ ಪತ್ರವನ್ನು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ, ಪ್ರಥಮ ಪಾಲು ಪತ್ರವನ್ನು ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಕಾಶ್ ರಾವ್, ಪ್ರಥಮ ಸಾಲ ಪತ್ರವನ್ನು ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ, ಎಣ್ಮೂರು ಗ್ರಾ.ಪಂ.ಅಧ್ಯಕ್ಷೆ ಜಾನಕಿ ಅಲೆಂಗಾರ, ಪ್ರಗತಿಪರ ಕೃಷಿಕ ಕೆ.ಎನ್.ಪರಮೇಶ್ವರಯ್ಯ ಕಲ್ಮಡ್ಕ, ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೆಟ್ಟ ಉದಯಕುಮಾರ್, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ, ಎಣ್ಮೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಹುದೇರಿ, ಧರ್ಮಶ್ರೀ ಆರ್ಕೇಡ್ ನ ಮಾಲಕ ಎಂ.ಮಾಧವ ಗೌಡ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪಿ.ಎಸ್‌.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ‌.ಟಿ.ವಿಶ್ವನಾಥ್, ನಿರ್ದೇಶಕರಾದ ಪಿ.ಸಿ.ಜಯರಾಮ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀ ನಾರಾಯಣ ನಡ್ಕ, ಮೋಹನ್ ರಾಂ ಸುಳ್ಳಿ, ದಿನೇಶ್ ಮಡಪ್ಪಾಡಿ, ದಾಮೋದರ ಎನ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror