ನ.18ರಂದು ನೂತನ ಸಿಜೆಐಯಾಗಿ ಅರವಿಂದ್ ಶರದ್ ಬೊಬ್ಡೆ ಪ್ರಮಾಣ ವಚನ

October 29, 2019
12:41 PM

ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅರವಿಂದ್ ಬೊಬ್ಡೆ ನೇಮಕವಾಗಿದ್ದು, ನವೆಂಬರ್ 18 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಬೊಬ್ಡೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಸ್ಟೀಸ್ ರಂಜನ್ ಗೊಗಾಯ್ ಅವರು ಜಸ್ಟೀಸ್ ಅರವಿಂದ್ ಬೊಬ್ಡೆ ಅವರ ಹೆಸರನ್ನು ಉನ್ನತ ಹುದ್ದೆಗೆ ಶಿಫಾರಸು ಮಾಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

ನ.17ರಂದು ಹಾಲಿ ಸಿಜೆಐ ರಂಜನ್ ಗೊಗಾಯ್ ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ 47 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮಧ್ಯಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿದ್ದ ಜಸ್ಟೀಸ್ ಬೊಬ್ಡೆ ಅವರು 2021 ಏ.23ರಂದು ನಿವೃತ್ತಿಯಾಗಲಿರುವರು.

ಶರದ್ ಅರವಿಂದ್ ಬೊಬ್ಡೆ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏ.24, 1956ರಂದು ಜನಿಸಿದ ಬೊಬ್ಡೆ ಅವರು ನಾಗ್ಪುರ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವರು. ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ. 2000ರ ಮಾ. 29ರಂದು ಬಾಂಬೆ ಹೈಕೋರ್ಟಿನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾದರು. 2013ರ ಏಪ್ರಿಲ್ ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದಿದ್ದಾರೆ.

ಅಯೋಧ್ಯಾ ಪ್ರಕರಣ, ಬಿಸಿಸಿಐ ಕೇಸ್, ಪಟಾಕಿ ನಿಷೇಧ ಪ್ರಕರಣ ಮುಂತಾದ ಪ್ರಕರಣಗಳನ್ನು ಬೊಬ್ಡೆ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror