ನ ಪಂ ಚುನಾವಣೆ : 10 ನೇ ವಾರ್ಡ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

May 18, 2019
11:53 AM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ 10ನೇ ವಾರ್ಡ್ (ಪುರಭವನ-ಕೇರ್ಪಳ)ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸಿ‌.ಸುನಿಲ್ ಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕಾರಗೊಂಡಿದೆ.

Advertisement

ಶುಕ್ರವಾರ ನಾಮಪತ್ರಗಳ ಪರಿಶೀಲನೆ ವೇಳೆ ಇವರ ನಾಮಪತ್ರವನ್ನು ತಾಂತ್ರಿಕ ಕಾರಣಗಳಿಂದ ಕಾಯ್ದಿರಿಸಲಾಗಿತ್ತು. ಇಂದು ನಿರ್ಧಾರ ಪ್ರಕಟಿಸಿದ ಚುನಾವಣಾಧಿಕಾರಿ ದೇವರಾಜ್ ಮುತ್ಲಾಜೆ ನಾಮಪತ್ರವನ್ನು ತಿರಸ್ಕರಿಸಿದ್ದಾರೆ. ಮತದಾರರ ಪಟ್ಟಿಯಲ್ಲಿನ ಕ್ರಮ ಸಂಖ್ಯೆ ಮತ್ತು ಭಾಗ ಸಂಖ್ಯೆ ನಮೂದಿಸಿರುವುದಲ್ಲಿ ಲೋಪ ಉಂಟಾದ ಕಾರಣ ನಾಮಪತ್ರದ ಕುರಿತಾದ ನಿರ್ಧಾರ ಪ್ರಕಟಿಸುವುದನ್ನು ಮುಂದೂಡಲಾಗಿತ್ತು. ಮತ್ತು ದೃಢೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಿದ್ದರು. ಬಳಿಕ ಸುನಿಲ್ ಕುಮಾರ್ ದೃಢೀಕರಣ ಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ನಾಮಪತ್ರವನ್ನು ತಿರಸ್ಕರಿಸಿದ್ದಾರೆ.

ನಾಮಪತ್ರದಲ್ಲಿ ಮತ್ತು ಪ್ರಮಾಣ ಪತ್ರದಲ್ಲಿ ಮತದಾರ ಪಟ್ಟಿಯ ಕ್ರಮ ಸಂಖ್ಯೆ ಮತ್ತು ಭಾಗ ಸಂಖ್ಯೆ ನಮೂದಿಸಿರುವುದಲ್ಲಿ ಲೋಪ ಕಂಡು ಬಂದ ಕಾರಣ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2047 ರ ವೇಳೆಗೆ ಕೇಂದ್ರ ಸರ್ಕಾರದಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
July 6, 2025
10:40 AM
by: ದ ರೂರಲ್ ಮಿರರ್.ಕಾಂ
ತುಂಗಾ, ಭದ್ರಾ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ | ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ
July 6, 2025
10:34 AM
by: ದ ರೂರಲ್ ಮಿರರ್.ಕಾಂ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group