ನ ಪಂ ಚುನಾವಣೆ : ಅತೃಪ್ತ ಕಾಂಗ್ರೆಸ್ಸಿಗರು ಪ್ರತ್ಯೇಕ ಸಭೆ ನಡೆಸಲು ನಿರ್ಧಾರ

May 17, 2019
5:05 PM

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆ ಅಭ್ಯರ್ಥಿ ಘೋಷಣೆ ಆದ ಬಳಿಕ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಬೋರುಗುಡ್ಡೆ ವಾರ್ಡ್ ನಲ್ಲಿ ಕಾಂಗ್ರೆಸ್ ನ ಆರ್.ಕೆ.ಮಹಮ್ಮದ್ ಗೆ ಸೀಟ್ ನಿರಾಕರಣೆಯ ಹಿನ್ನಲೆಯಲ್ಲಿ ಅತೃಪ್ತರಾದ ಕಾಂಗ್ರೆಸ್ ನ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಪದಾಧಿಕಾರಿಯೋರ್ವರ ನೇತೃತ್ವದಲ್ಲಿ ಮೇ.20 ರಂದು ನಡೆಯುವ ಸಭೆಯ ಬಳಿಕ ನಿರ್ಧಾರವನ್ನು ಪ್ರಕಟಿಸಲಿದ್ದಾರೆ. ಸಭೆಯಲ್ಲಿ ಬೋರುಗುಡ್ಡೆ, ನಾವೂರು, ಕೆರೆಮೂಲೆ, ಕಲ್ಲುಮುಟ್ಲು ವಾರ್ಡ್ ಗಳ ಅತೃಪ್ತ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಬೋರುಗುಡ್ಡೆ ವಾರ್ಡ್ ನಲ್ಲಿ ಆರ್.ಕೆ.ಮಹಮ್ಮದ್ ಗೇ ಸೀಟ್ ನೀಡಬೇಕು ಎಂದು ಕಾಂಗ್ರೆಸ್ ನ ಒಂದು ಗುಂಪು ಪ್ರಬಲವಾದ ಬೇಡಿಕೆಯನ್ನಿಟ್ಟಿದ್ದರು. ಅಭ್ಯರ್ಥಿತನಕ್ಕೆ ಕೊನೆಯವರೆಗೆ ರೇಸ್ ನಲ್ಲಿದ್ದ ಆರ್.ಕೆ. ಹೆಸರು ಒಂದು ಹಂತದಲ್ಲಿ ಬಹುತೇಕ ಅಂತಿಮಗೊಂಡಿದೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಇವರಿಗೆ ಸೀಟ್ ಕೈ ತಪ್ಪಿತ್ತು. ಇದರಿಂದ ಅಸಮಾಧಾನಗೊಂಡ ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿ ಸಡ್ಡು ಹೊಡೆದಿದ್ದಾರೆ. ಇದೀಗ ಆರ್.ಕೆ ಪರ ಬ್ಯಾಟಿಂಗ್ ಮಾಡುತ್ತಿರುವ ಒಂದು ಗುಂಪು ಪ್ರತ್ಯೇಕ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror