ನಪಂ ಚುನಾವಣೆ: ಚುನಾವಣಾ ಬಹಿಷ್ಕಾರ ಹಿಂಪಡೆದ ಟೂರಿಸ್ಟ್ ವಾಹನ ಚಾಲಕರು

May 28, 2019
10:31 PM

ಸುಳ್ಯ‌:ಸುಳ್ಯ ತಾಲೂಕು ಟೂರಿಸ್ಟ್ ಕಾರು, ವ್ಯಾನ್ ಚಾಲಕ -ಮಾಲಕರ ಸಂಘವು ಘೋಷಿಸಿದ್ದ ನ.ಪಂ.ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ.

ನ.ಪಂ.ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಅವರು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಮಾತುಕತೆಯ ಹಿನ್ನಲೆಯಲ್ಲಿ ಬಹಿಷ್ಕಾರವನ್ನು ಹಿಂಪಡೆಯಲಾಗಿದೆ. ಬಳಿಕ ಇವರು ಅಳವಡಿಸಿದ್ದ ಚುನಾವಣಾ ಬಹಿಷ್ಕಾರ ಬ್ಯಾನರ್ ತೆರವು ಮಾಡಲಾಯಿತು. ಟೂರಿಸ್ಟ್ ಕಾರು, ವ್ಯಾನ್ ಗಳಿಗೆ ತಂಗಲು ಸುಸಜ್ಜಿತ ನಿಲ್ದಾಣ ನಿರ್ಮಾಣ ಮಾಡದೇ ಇರುವುದನ್ನು ಪ್ರತಿಭಟಿಸಿ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಲಾಗಿತ್ತು. ತಾತ್ಕಾಲಿಕವಾಗಿ ಈಗ ಇರುವ ನಿಲ್ದಾಣದಲ್ಲೇ ನಾಮ ಫಲಕ ಅಳವಡಿಸಿ ಟೂರಿಸ್ಟ್ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲು ತಹಶೀಲ್ದಾರ್ ಸೂಚನೆ ನೀಡಿದರು. ಮುಂದೆ ಸರಕಾರಿ ಜಮೀನು ಲಭಿಸಿದಲ್ಲಿ ಬೇರೆ ಕಡೆ ಸುಸಜ್ಜಿತ ನಿಲ್ದಾಣ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಚುನಾವಣಾ ಬಹಿಷ್ಕಾರ ಹಿಂಪಡೆಯಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror