ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹ

August 23, 2019
12:45 PM

ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ  ಪೆರ್ಲ ಪೇಟೆಯಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹಿಸಲಾಯಿತು.

ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ಮಾತನಾಡಿ, ನೆರೆಯಿಂದಾಗಿ ಯಾವುದೇ ಸಮಸ್ಯೆ ಎದುರಿಸದೇ, ಬೆಚ್ಚಗಿನ ಮನೆಯಲ್ಲಿ ವಾಸಿಸುತ್ತ, 3 ಹೊತ್ತು ಹೊಟ್ಟೆ ತುಂಬಾ ಆಹಾರ ಸೇವಿಸುವ, ಬಣ್ಣ ಬಣ್ಣದ ಬಟ್ಟೆ ಧರಿಸುವ, ನಾವು ಪುಣ್ಯವಂತರು. ಆದರೆ ಭೀಕಾರ ಮಳೆಯಿಂದಾಗಿ ಉಂಟಾದ ನೆರೆಯಿಂದಾಗಿ, ತಮ್ಮದನ್ನೆಲ್ಲ ಕಳೆದುಕೊಂಡ, ಮನೆಯಿಲ್ಲದೇ ನಿರಾಶ್ರಿತರ ಕೇಂದ್ರದಲ್ಲಿ ವಾಸಿಸುವ, ಒಂದು ಹೊತ್ತಿನ ಅನ್ನಕ್ಕೆ ಪರದಾಡುವ, ಉಡಲು ಬಟ್ಟೆ ಇಲ್ಲದೆ, ಉಟ್ಟ ಬಟ್ಟೆಯನ್ನೇ ಉಡುವಾ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿ, ನಮ್ಮಿಂದಾದ ಸಹಾಯ ಮಾಡುವುದು ಪ್ರತಿಯೊಬ್ಬನ ಕರ್ತವ್ಯ. ಇಂದು ನಾವು ನಿರಾಶ್ರಿತರಿಗೆ ಆಸರೆ ಆದಲ್ಲಿ, ಮುಂದೊಂದು ದಿನ ನಮಗೆ ಆ ಪರಿಸ್ಥಿತಿ ಎದುರಾಗಿಸಬೇಕಾಗಿ ಬಂದಲ್ಲಿ ಇನ್ನೊಬ್ಬ ನಮಗೆ ಆಸರೆ ಆಗುತ್ತಾನೆ ಎನ್ನುವುದಲ್ಲಿ ಸಂಶಯವಿಲ್ಲ ಎಂದರು.

ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್, ಶ್ರೀನಿಧಿ, ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಜಗತ್, ಅಭಿಲಾಶ್, ಅಜಿತ್, ಅಂಜನಾ, ಕಾವ್ಯ ಹಾಗೂ ಎನ್ನೆಸ್ಸೆಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |
March 16, 2025
11:20 AM
by: ಸಾಯಿಶೇಖರ್ ಕರಿಕಳ
ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ
March 16, 2025
7:53 AM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ
March 16, 2025
7:36 AM
by: The Rural Mirror ಸುದ್ದಿಜಾಲ
ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
March 16, 2025
7:29 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror