ನ.18ರಂದು ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸಾ ದಿನಾಚರಣೆ

November 16, 2019
6:50 PM

ಉಜಿರೆ: ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಸೋಮವಾರ ಎರಡನೆ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಯಲಿದೆ ಎಂದು ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ ಶೆಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಖಿಲ ಭಾರತ ಪ್ರಕೃತಿ ಚಿಕಿತ್ಸಾ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷರಾಗಿ ರಾಷ್ಟ್ರಪಿತ ಮಹಾತ್ಮಾಗಾಂಧೀಜಿ 1945 ರ ನ. 18 ರಂದು ದಾಖಲೆಗೆ ಸಹಿ ಹಾಕಿರುವುದರಿಂದ ಕೇಂದ್ರ ಸರ್ಕಾರ ಮತ್ತು ಆಯುಷ್‍ ಇಲಾಖೆಯ ನಿರ್ದೇಶನದಂತೆ ನ.18 ರಂದು ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವಾಗಿ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ದೇಶದೆಲ್ಲೆಡೆ ಪ್ರಕೃತಿ ಚಿಕಿತ್ಸಾ ದಿನಾಚರಣೆ ನಡೆಸಲಾಗುತ್ತದೆ.

1200 ಪ್ರತಿನಿಧಿಗಳು ಹಾಗೂ ರಾಜ್ಯದ ಎಂಟು ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸುವರು. ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮಧುಮೇಹ ಮತ್ತು ಪ್ರಕೃತಿ ಚಿಕಿತ್ಸೆ ಬಗ್ಗೆ ಕಾರ್ಯಾಗಾರ ನಡೆಯುತ್ತದೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಆರು ತಿಂಗಳುಗಳಿಂದ ಉಚಿತ ಆರೋಗ್ಯ ಶಿಬಿರ ನಡೆಸಿ ರಕ್ತದೊತ್ತಡ, ಬೊಜ್ಜು, ಮಧುಮೇಹದ ಬಗ್ಗೆ ಅರಿವು, ಜಾಗೃತಿ ಮೂಡಿಸಲಾಗಿದೆ. ಧರ್ಮಸ್ಥಳದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಈಗಾಗಲೆ ಮೂರು ಕೋಟಿ ರೂ.ವೆಚ್ಚದಲ್ಲಿ ಪ್ರಯೋಗಾಲಯ ಪ್ರಾರಂಭಿಸಿದ್ದು, ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‍ ಅಖ್ತರ್ ರಾಷ್ಟ್ರೀಯ ಪ್ರಕೃತಿ ದಿನಾಚರಣೆ ಉದ್ಘಾಟಿಸುವರು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಶುಭಾಶಂಸನೆ ಮಾಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಕಾಲೇಜಿನ ಡೀನ್‍ ಡಾ.ಗೀತಾ ಶೆಟ್ಟಿ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror