ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

July 6, 2019
2:55 PM

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆ ಅವರ ಮನೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ.ಶ್ರೀಶಕುಮಾರ್ ಅವರು , ಮಳೆ ನೀರಿಂಗಿಸುವ ವಿವಿಧ ವಿಧಾನಗಳು ಹಾಗು ಜನಜಾಗೃತಿ ಅಭಿಯಾನದ ಯಶಸ್ಸಿಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಪ್ರತಿ ನಾಗರಿಕರು ಮಳೆ ನೀರಿಂಗಿಸುವ ಕಾರ್ಯ ಮಾಡುವ ಮೂಲಕ ಗ್ರಾಮವನ್ನು ದೇಶದಲ್ಲೇ ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದರು.

ಜಿ.ಪಂ.ಮಾಜಿ ಸದಸ್ಯ ಸುರೇಶ್ ಕುಮಾರ್ ಸೊರಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮವನ್ನು ಗ್ರಾಮದಾದ್ಯಂತ ಯಶಸ್ವಿಗೊಳಿಸಿ ಡಿಸೆಂಬರ್ ಅಂತ್ಯದಲ್ಲಿ ಸೊರಕೆ ಕಿಂಡಿ ಅಣೆಕಟ್ಟೆ ಬಳಿ ಈ ವರ್ಷದ ಸಮಾರೋಪ ಕಾರ್ಯಕ್ರಮವನ್ನು ಊರಿನ ಜನರ ಹಾಗು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಆಯೋಜಿಸಲಾಗುವುದು ಎಂದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು,ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಗೌರವ ಸಲಹೆಗಾರ ಶಶಿಧರ್ ಎಸ್ ಡಿ, ಪದಾ„ಕಾರಿಗಳಾದ ಡಾ.ಪ್ರವೀಣ್ ಸರ್ವೆದೋಳಗುತ್ತು, ಅಶೋಕ್ ಎಸ್ ಡಿ, ಮನೋಜ್ ಸುವರ್ಣ ಸೊರಕೆ, ಜಯರಾಜ್ ಸುವರ್ಣ ಸೊರಕೆ, ಸದಸ್ಯರಾದ ಹರೀಶ್ ಪಾಲೆತ್ತಗುರಿ, ಸಂದೇಶ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ರಾಜಗೋಪಾಲ್ ಗೌಡ ಕಂಪ, ಸ್ಥಳೀಯರಾದ ರಾಮಕೃಷ್ಣ ಪ್ರಭು, ಈರಪ್ಪ ಪೂಜಾರಿ ಸೊರಕೆ, ತಾರಾ ಸೊರಕೆ, ಹರ್ಷಿಣಿ ಸುರೇಶ್ ಸೊರಕೆ, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror