ನೀರಿನ ಹೊಂಡಕ್ಕೆ ಬಿದ್ದು ಮಹಿಳೆ ಸಾವು

April 24, 2019
12:14 PM

ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ
ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |
March 12, 2025
7:10 AM
by: The Rural Mirror ಸುದ್ದಿಜಾಲ
ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror