ನೆರೆ ಹಾನಿ ಪ್ರದೇಶಕ್ಕೆ 30 ಕೋಟಿ ಬಿಡುಗಡೆ

October 26, 2019
7:22 PM

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆಹಾವಳಿಯಿಂದ ಕೃಷಿ ಭೂಮಿಗಳು ಹಾಗೂ ಕಿಂಡಿಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಇವುಗಳ ದುರಸ್ತಿ ಗೆ 30 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು  ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

Advertisement
Advertisement

ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಾದ ಕುಕ್ಕಾವು, ಪರ್ಲಾಣಿ, ಚಾರ್ಮಾಡಿ ಅರಣೆಪಾದೆ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  ಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಮಳೆ ಕಡಿಮೆಯಾದ ತಕ್ಷಣ ಹಾನಿಯಾದ ಕಿಂಡಿಅಣೆಕಟ್ಟುಗಳ ದುರಸ್ಥಿ ಕಾರ್ಯ ಮಾಡಲಾಗುವುದು. ಅಲ್ಲದೆ ನೀರು, ಕೃಷಿ ಭೂಮಿಗೆ ಬರದ ರೀತಿಯಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ಇಲ್ಲಿನ ಶಾಸಕರು ಈಗಾಗಲೇ ಮನವಿಮಾಡಿದ್ದು ಈ ಬಗ್ಗೆ ಇಲಾಖೆ ಗಂಭೀರವಾಗಿ ಚಿಂತಿಸಿದೆ ಎಂದರು.

ಶಾಸಕ ಹರೀಶ್ ಪೂಂಜಾ ತಾಲೂಕಿನಲ್ಲಿ ಹಾನಿಗೊಳಗಾದ ಪ್ರದೇಶದ ಬಗ್ಗೆ ಸಚಿವರಲ್ಲಿ ಮಾಹಿತಿ ನೀಡಿದರು. ಬಳಿಕ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಅನುದಾಣ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ತಾ.ಪಂ ಸದಸ್ಯ ಕೊರಗಪ್ಪ ಗೌಡ, ಸಣ್ಣ ನೀರಾವರಿ ಇಲಾಖಾ ಅಧೀನ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಹಾಯಕ ಇಂಜಿನಿಯರ್ ಪ್ರಸನ್ನ, ರಾಕೇಶ್, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಜಯಕೀರ್ತಿ, ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group