ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು- ವಾರ್ಷಿಕ ಕ್ರೀಡಾಕೂಟ

November 26, 2019
2:50 PM

ಸುಳ್ಯ: ಕ್ರೀಡೆಯು ಪ್ರತಿಯೊಬ್ಬನಿಗೆ ಪ್ರಾಮುಖ್ಯವಾದುದು. ಅದು ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುವುದು ಎಂದು ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಅವರು ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಉಧ್ಘಾಟಿಸಿ ಮಾತನಾಡುತ್ತಿದ್ದರು. ದ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ , ಕೋಚ್ ಗಣೇಶ್ ರೈ ಪುತ್ತೂರು ಇವರು ನೆರವೇರಿಸಿ, ಉತ್ತಮ ಕ್ರೀಡಾಸ್ಫೂರ್ತಿಯಿಂದ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯವಾಗುತ್ತದೆ. ದೈಹಿಕ ಚಲನೆಯಿರುವ ಆಟದಲ್ಲಿ ತೊಡಗಿಸಿಕೊಂಡಾಗಿನ ಪರಿಣಾಮ ಅದ್ಭುತವಾಗಿರುತ್ತದೆ ಎಂದು ನುಡಿದು ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ನಿರ್ದೇಶಕರಾದ ಶೋಭಾ ಚಿದಾನಂದ ಅವರು ವಹಿಸಿದ್ದರು. ಅವರು ಮಾತನಾಡಿ , ಶಿಕ್ಷಣ ಮತ್ತು ಕ್ರೀಡೆ ಎರಡನ್ನು ಸಮದೂಗಿಸಿಕೊಂಡು ಮುನ್ನಡೆಯಬೇಕು . ಕಠಿಣ ಪರಿಶ್ರಮ ಯಶಸ್ಸನ್ನು ತಂದುಕೊಡುತ್ತದೆ ಎಂದರು. ಜೀವನದಲ್ಲಿ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬೇಕು, ಕೇವಲ ವಾರ್ಷಿಕ ಕ್ರೀಡಾಕೂಟಗಳಿಗೆ ಆಟವನ್ನು ಸೀಮಿತಗೊಳಿಸದೆ ದಿನಂಪ್ರತಿ ಸ್ವಲ್ಪ ಸಮಯವನ್ನು ಕ್ರೀಡೆಗೆ ಮೀಸಲಿಟ್ಟು, ಪಠ್ಯದಲ್ಲಿ ಚೆನ್ನಾಗಿ ತೊಡಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವೇದಿಕೆಯಲ್ಲಿ ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರು ಡಾ. ಗಿರಿಧರ ಗೌಡ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.

Advertisement

ಗುಂಪು ಸಮವಸ್ತ್ರದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು ಮತ್ತು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಕ್ರೀಡಾ ಮೈದಾನಕ್ಕೆ ಆಕರ್ಷಕವಾಗಿ ಹೊತ್ತು ಸಾಗಿ ಬಂದರು. ವಿದ್ಯಾರ್ಥಿ ನಾಯಕ ರಜತ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಪದವಿ ಕಾಲೇಜಿನ ಎನ್ ಸಿಸಿ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ವಿಶೇಷ ಮೆರುಗು ನೀಡಿತ್ತು. ಉಧ್ಘಾಟನಾ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ್ ಸ್ವಾಗತಿಸಿ, ಉಪನ್ಯಾಸಕ ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾರ್ಯಕ್ರವನ್ನು ಉಪನ್ಯಾಸಕಿ ಹರ್ಷಿತಾ ಮತ್ತು ಉಪನ್ಯಾಸಕ ಕಿಶೋರ್ ಕುಮಾರ್ ಅವರು ನಿರ್ವಹಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group