ಪಂಜದಲ್ಲಿ ವ್ಯಕ್ತಿ ನಾಪತ್ತೆ: ನೀರು ಪಾಲಾಗಿರುವ ಸಂದೇಹ , ಮುಂದುವರಿದ ಶೋಧಕಾರ್ಯ

September 5, 2019
9:00 AM

ಪಂಜ: ಅನಾರೋಗ್ಯ ಹಿನ್ನಲೆಯಲ್ಲಿ ಔಷಧಿ ತರಲೆಂದು ಪೇಟೆಗೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪಂಜ ಸಮೀಪದ ಕೂತ್ಕುಂಜ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕೂತ್ಕುಂಜ ಕುದ್ವ ಶೇಷಪ್ಪ ಗೌಡ ನಾಪತ್ತೆಯಾದ ವ್ಯಕ್ತಿ. ಅವರು ಪಲ್ಲೋಡಿ ಹೊಳೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನಲೆಯಲ್ಲಿ ಬುಧವಾರ ಪಂಜದ ಹೊಳೆಯಲ್ಲಿ ಅವರ ಹುಡುಕಾಟ ನಡೆಯಿತು.

ಮಂಗಳವಾರ ಶೇಷಪ್ಪ ಗೌಡರು ಮೈ ಹುಷಾರಿಲ್ಲ ಎಂದು ಮನೆಯವರಲ್ಲಿ ಹೇಳಿ ಪಂಜ ಪೇಟೆಗೆ ತೆರಳಿದ್ದರು. ಬಳಿಕ ಅವರು ಮರಳಿ ಮನೆಗೆ ಬಂದಿರಲಿಲ್ಲ. ಅವರನ್ನು ಹುಡುಕುತ್ತ ಮಗ ಪಂಜದ ಕಡೆ ಹೊರಟಿದ್ದರು. ಕಾಲು ದಾರಿಯಲ್ಲಿ ಹುಡುಕುತ್ತ ಹೋಗುತಿದ್ದಾಗ ತೋಟದ ಪಕ್ಕ ಹರಿಯುವ ತೋಡಿಗೆ ಹಾಕಿದ್ದ ಮರದ ಪಾಲದ ಬದಿಗೆ ಅಳವಡಿಸಿದ ಅಡ್ಡ ತುಂಡಾಗಿ ಬಿದ್ದಿರುವುದು ಕಂಡು ಬಂದಿತ್ತು. ಸಂಶಯಗೊಂಡು ಹುಡುಕಾಟ ನಡೆಸಿದಾಗ ತೋಡಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು.

ಅವರು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಶಂಕೆ  ಹಿನ್ನಲೆಯಲ್ಲಿ ರಾತ್ರಿಯೇ ಗ್ರಹರಕ್ಷಕ ದಳದವರನ್ನು ಹಾಗೂ ಮುಳುಗು ತಜ್ಞರನ್ನು ಕರೆಯಿಸಿ ಬುಧವಾರ ಹುಡುಕಾಟ ನಡೆಸಲಾಯಿತು. ಸಂಜೆ ತನಕವೂ ಯಾವುದೇ ಸುಳಿವು ದೊರಕಿಲ್ಲ. ಸ್ಥಳಕ್ಕೆ ಸುಳ್ಯ ತಹಶೀಲ್ದಾರ್ ಕುಂಞ ಅಹಮ್ಮದ್ ಭೇಟಿ ನೀಡಿ ಮಾಹಿತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror