ಪತ್ರಕರ್ತ ಮಹಮ್ಮದ್ ಆರಿಫ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

June 23, 2019
10:30 AM

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ.

Advertisement
Advertisement

ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಮಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ,ವಸಂತ ಕುಮಾರ್ ಪೆರ್ಲ ಮತ್ತು ಬೆಸೆಂಟ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸ್ಮಿತಾ ಶೆಣೈ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಈ ಆಯ್ಕೆ ನಡೆಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪುರಸ್ಕೃತ ಸುಕೇಶ್ ಕುಮಾರ್ ದತ್ತಿನಿಧಿಯಿಂದ ‘ಬ್ರಾಂಡ್ ಮಂಗಳೂರು’ ಪ್ರಶಸ್ತಿ ನೀಡಲಾಗುತ್ತಿದೆ.

ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |
July 23, 2025
6:49 AM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ
July 22, 2025
9:11 PM
by: The Rural Mirror ಸುದ್ದಿಜಾಲ
ಪಾವಗಡ ತಾಲೂಕಿನಲ್ಲಿ ಕುಡಿಯುವ ಯೋಜನೆಗೆ  ಮುಖ್ಯಮಂತ್ರಿ ಚಾಲನೆ
July 22, 2025
7:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group