ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಪೂರ್ಣ ಮಾಹಿತಿಯೊಂದಿಗೆ ಬನ್ನಿ- ಇಲಾಖಾಧಿಕಾರಿಗಳಿಗೆ ಪುತ್ತೂರು ಸಹಾಯಕ ಕಮೀಷನರ್ ಸೂಚನೆ

December 18, 2019
9:32 PM

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಡಿ. 22 ರಂದು ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳಿಗೆ ಮತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಸೂಚನೆ ನೀಡಿದ್ದಾರೆ.

ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಹಿನ್ನಲೆಯಲ್ಲಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ಇಲಾಖೆಗಳದ್ದೇ ಕಾರ್ಯಕ್ರಮ ಎಂಬ ಭಾವನೆ ಇರಲಿ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಮಗೆ ಹೆಮ್ಮೆ. ನಮ್ಮ ಸೇವಾ ಅವಧಿಯಲ್ಲಿ ದಾಖಲಿಸಲ್ಪಡುವ ಅಪೂರ್ವ ಕಾರ್ಯಕ್ರಮ. ಜನರ ಮತ್ತು ಆಡಳಿತ ವ್ಯವಸ್ಥೆಯ ಮಧ್ಯೆ ಕೊಂಡಿಯಾಗಿ ಪತ್ರಕರ್ತರ ಸಂಘ ಈ ಕಾರ್ಯಕ್ರಮ ಆಯೋಜಿಸಿದೆ ಅಸ್ಟೇ. ಆದುದರಿಂದ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಅವರು ಹೇಳಿದರು. ಇಲಾಖೆಯ ಕಾರ್ಯಕ್ರಮಗಳನ್ನು ಜನರೆಡೆಗೆ ತಲುಪಿಸಲು ಇದೊಂದು ವೇದಿಕೆ. ಹಾಗಾಗಿ ಎಲ್ಲಾ ಇಲಾಖೆಗಳು ತಮ್ಮ ಸ್ಟಾಲ್‌ಗಳನ್ನು ತೆರೆದು ಜನರಿಗೆ ಮಾಹಿತಿ ನೀಡುವಂತೆ ಅವರು ಸೂಚನೆ ನೀಡಿದರು.

ವಿವಿಧ ಇಲಾಖೆಗಳ ಮುಖ್ಯಸ್ಥರಿಂದ ಗ್ರಾಮವಾಸ್ತವ್ಯದ ಸಿದ್ಧತೆಯ ಕುರಿತು ಮಾಹಿತಿ ಪಡೆದ ಅವರು ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದ ಯಶಸ್ವಿನ ಜೊತೆಗೆ ನಾಗರಿಕ ಸ್ನೇಹಿ ವರ್ತನೆಯೊಂದಿಗೆ ಇಲಾಖೆಯ ಗೌರವ ಕಾಪಾಡಲು ಪ್ರತಿಯೊಬ್ಬ ಸಿಬ್ಬಂದಿಯೂ ಬದ್ಧರಾಗಿರಬೇಕು. ಗ್ರಾಮಸ್ಥರೊಂದಿಗೆ ಸಕಾರಾತ್ಮಕ ವಾಗಿ ಸ್ಪಂದಿಸಬೇಕು.
ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಶ್ರಮಿಸಬೇಕು. ಪ್ರತಿಯೊಂದು ಅಹವಾಲನ್ನೂ ಅಲಿಸಿ ಗ್ರಾಮಸ್ಥರಿಗೆ ಸಮಾಧಾನಕರ ಉತ್ತರವನ್ನು ನೀಡಬೇಕು. ಯಾರಾದರೂ ನಕಾರಾತ್ಮಕವಾಗಿ ಸ್ಪಂದಿಸಿದರೆ ಅಂತವರ ವಿರುದ್ಧ ಸ್ಥಳದಲ್ಲಿಯೇ ಕ್ರಮ ಜರುಗಿಸಲಾಗಿವುದು ಎಂದರು. ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಮುಂಚಿತವಾಗಿ ಎಲ್ಲಾ ಇಲಾಖಾ ಅಧಿಕಾರಿಗಳು ಮಡಪ್ಪಾಡಿಗೆ ತೆರಳಿ ಪರಿಶೀಲನೆ ನಡೆಸಬೇಕು ಎಂದು ಸಹಾಯಕ ಕಮೀಷನರ್ ಸೂಚಿಸಿದರು‌.

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿಅಹ್ಮದ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಪೊಲೀಸ್ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಗ್ರಾಮ ವಾಸ್ತವ್ಯದ ಕಾರ್ಯಕ್ರಮದ ಕುರಿತು ವಿವಿರ ನೀಡಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಹಾಯಕ ಕಮೀಷನರ್ ಬಿಡುಗಡೆಗೊಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಸುಳ್ಯ ಎಸ್.ಐ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ತ್ಯಾಗರಾಜ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಣ್ಣೇ ಗೌಡ, ಜಿಲ್ಲಾ ಪಂಚಾಯತ್ ಎಇಇ ಹನುಮಂತರಾಯಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಲಕ್ಷ್ಮಿ, ಸಿಡಿಪಿಒ ರಶ್ಮಿ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಸುಹಾನಾ, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾನುಮತಿ, ಮೆಸ್ಕಾಂ ಇಂಜಿನಿಯರ್ ಹರೀಶ್, ದೇವರಾಜ್ ಮುತ್ಲಾಜೆ, ಲಕ್ಷ್ಮೀಶ ರೈ, ಮೋಹನ್ ನಂಗಾರು ಮತ್ತಿತರರು ಸಲಹೆ ಸೂಚನೆಗಳನ್ನು ನೀಡಿದರು.

ದ‌.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಲೋಕೇಶ್ ಪೆರ್ಲಂಪಾಡಿ, ಗಂಗಾಧರ ಕಲ್ಲಪಳ್ಳಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಪತ್ರಕರ್ತರ ಸಂಘದ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಗುರುವಾರ ಮಡಪ್ಪಾಡಿಗೆ ಭೇಟಿ: ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಗ್ರಾಮ ವಾಸ್ತವ್ಯದ ಹಿನ್ನಲೆಯಲ್ಲಿ ಗುರುವಾರ ಮಡಪ್ಪಾಡಿ ಗ್ರಾಮಕ್ಕೆ ಭೇಟಿ ನೀಡುವುದಾಗಿ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಳ ತಿಳಿಸಿದ್ದಾರೆ. ಸುಳ್ಯ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮತ್ತಿತರ ಅಧಿಕಾರಿಗಳ ಜೊತೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror