ಪಯಸ್ವಿನಿಯಲ್ಲಿ ನೀರೆಲ್ಲಿ…. ನೀರೆಲ್ಲಿ….; ಗಡಿ ಗ್ರಾಮದ ಜನರ ಹುಡುಕಾಟ

April 25, 2019
5:21 PM

ಸುಳ್ಯ: ಪಯಸ್ವಿನಿ ನದಿ ಆಶ್ರಯಿಸಿಕೊಂಡಿರುವ ಗಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜನರು ನೀರಿಗಾಗಿ ಹಾಹಾಕಾರ ಪಡುವ ಸ್ಥಿತಿ ನಿರ್ಮಾಣವಾಗಿದೆ.

Advertisement
Advertisement
Advertisement
Advertisement

ಸುಳ್ಯ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶಗಳಾದ ಪಂಜಿಕಲ್ಲು, ಮುರೂರು, ಮಂಡೆಕೋಲು ಭಾಗಗಳಲ್ಲಿ ಕಳೆದ ಒಂದು ತಿಂಗಳಿನಿಂದ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪ್ರದೇಶಗಳ ಪ್ರಮುಖ ಜಲ ಮೂಲವಾದ ಪಯಸ್ವಿನಿ ನದಿ ಬತ್ತಿರುವುದರಿಂದ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಸಂಪೂರ್ಣ ಹರಿವು ನಿಲ್ಲಿಸಿದ ಪಯಸ್ವಿನಿಯ ಒಡಲಿನಲ್ಲಿ ಬಂಡೆ ಕಲ್ಲುಗಳು ಮಾತ್ರ ಗೋಚರಿಸುತ್ತದೆ. ಕಿಲೋಮೀಟರ್ ದೂರಕ್ಕೆ ನೀರೇ ಇಲ್ಲದೆ ಕೇವಲ ಬಂಡೆ ಕಲ್ಲುಗಳ ರಾಶಿಯೇ ಕಾಣಿಸುತಿದೆ. ನದಿಯ ಅಲ್ಲಲ್ಲಿ ಕೆಲವು ಹೊಂಡಗಳಲ್ಲಿ ಮಾತ್ರ ಅಲ್ಪ ಸ್ವಲ್ಪ ನೀರು ಕಾಣಿಸುತ್ತಿದೆ. ನದಿ ಪಕ್ಕದ ಕೃಷಿ ಭೂಮಿಗೂ ನೀರು ಸಾಕಾಗದೆ ಅಡಿಕೆ, ತೆಂಗು ಸೇರಿದಂತೆ ಕೃಷಿಗಳು ನಾಶವಾಗಿದೆ ಎನ್ನುತ್ತಾರೆ ಈ ಭಾಗದ ಕೃಷಿಕರು.

Advertisement

ಕೊಡಗು ಜಿಲ್ಲೆಯ ಜೋಡುಪಾಲ, ಮೊಣ್ಣಂಗೇರಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಸುರಿದ ಮಳೆಯಿಂದಾಗಿ ಪಯಸ್ವಿನಿ ನೀರಿನ ಹರಿವು ಆರಂಭವಾದರೂ ಕೆಳ ಭಾಗಕ್ಕೆ ಇನ್ನೂ ತಲುಪದ ಕಾರಣ ಗಡಿ ಪ್ರದೇಶದಲ್ಲಿ ನದಿಯಲ್ಲಿ ನೀರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

 

ಹೊಂಡಗಳಲ್ಲಿ ಮಾತ್ರ ಅಲ್ಪ ನೀರು ಉಳಿದಿದೆ:

Advertisement


ಪಂಜಿಕಲ್ಲು, ಮುರೂರು ಭಾಗಗಳಲ್ಲಿ ನದಿ ಪೂರ್ತಿಯಾಗಿ ಬರಡಾಗಿದ್ದು ಈ ಭಾಗದಲ್ಲಿ ನದಿಯಲ್ಲಿದ್ದ ಜಲಚರಗಳು ಸಂಪೂರ್ಣ ನಾಶವಾಗಿದೆ. ನೀರಿನ ಹರಿವು ನಿಂತು ಹೋಗಿ ಕೆಲವು ಹೊಂಡದಲ್ಲಿ ಮಾತ್ರ ನೀರಿನ ಶೇಖರಣೆಯಿದ್ದು ಆ ನೀರು ಬಿಸಿಲಿನ ತಾಪಕ್ಕೆ ಬಿಸಿಯಾಗಿ ಜಲಚರಗಳು ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. 2016ರಲ್ಲಿ ಕೆಲವು ಭಾಗಗಳಲ್ಲಿ ಪಯಸ್ವಿನಿ ನದಿ ಬತ್ತಿ ಹೋಗಿ ಜಲಚರಗಳ ಮಾರಣ ಹೋಮ ಸಂಭವಿಸಿತ್ತು.

 

Advertisement

 

Advertisement

ಬಿಸಿಲು ಮತ್ತು ಏರಿದ ಉಷ್ಣಾಂಶ ಹಾಗು ಮಳೆಯ ಕೊರತೆಯಿಂದ ಈ ಬಾರಿ ಜನವರಿ ತಿಂಗಳಲ್ಲೇ ನೀರಿನ ಮೂಲಗಳು ಬತ್ತಲು ಆರಂಭಿಸಿತ್ತು. ಮಾರ್ಚ್ ಕೊನೆಯವರೆಗೂ ಒಂದೇ ಒಂದು ಮಳೆ ದೊರೆಯದ ಕಾರಣ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ನೀರಿಗೆ ಹಾಹಾಕಾರ ಪಡುವ ಪರಿಸ್ಥಿತಿ ಸೃಷ್ಠಿಯಾಗಿದೆ. ಕಳೆದ ಒಂದು ವಾರದಿಂದ ಸ್ವಲ್ಪ ಮಳೆ ಬಂದರೂ ನೀರಿನ ಲಭ್ಯತೆ ಇನ್ನೂ ಹೆಚ್ಚಾಗಿಲ್ಲ ಎನುತ್ತಾರೆ ಸ್ಥಳೀಯರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾರಡ್ಕದಲ್ಲಿ ಕೃಷಿ ಹಬ್ಬ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ಸೇರ್ಪಡೆ | ಕೃಷಿ ಗೋಷ್ಟಿಯಲ್ಲಿ ಹೊಸತನ |
January 28, 2025
11:25 PM
by: ವಿಶೇಷ ಪ್ರತಿನಿಧಿ
ಅಡಿಕೆ ಕೃಷಿ ಭವಿಷ್ಯದಲ್ಲಿ ಎದುರಿಸಬೇಕಾಗುವ ಸವಾಲು ಯಾವುದು….? | ಮಿಶ್ರ ಕೃಷಿಯ ಅನಿವಾರ್ಯತೆ ಏಕೆ..? | ಗಮನದಲ್ಲಿರಲಿ ಅಧ್ಯಯನ ವರದಿ ಹೇಳಿರುವ ಅಂಶ |
January 28, 2025
12:51 PM
by: ಮಹೇಶ್ ಪುಚ್ಚಪ್ಪಾಡಿ
ಈ ಬಾರಿಯ ಬಜೆಟ್‌ನಲ್ಲಿ ಅಡಿಕೆ ಬೆಳೆ ರಕ್ಷಣೆಗೆ 67 ಕೋಟಿ ರೂಪಾಯಿ ನಿರೀಕ್ಷೆ | ಕರ್ನಾಟಕ ಸರ್ಕಾರದಿಂದಲೂ ತನ್ನ ಪಾಲನ್ನು ಮೀಸಲಿಡಲು ಒತ್ತಾಯ |
January 24, 2025
8:57 PM
by: ದ ರೂರಲ್ ಮಿರರ್.ಕಾಂ
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಪ್ರಕಾರ ಭಾರತದಲ್ಲಿ ಅರಣ್ಯ ಹೆಚ್ಚಳ-ಗುಣಮಟ್ಟ ಕುಸಿತ |
January 8, 2025
11:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror