ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ನಿಷೇಧ ಮುಂದುವರಿಕೆ

November 7, 2019
2:44 PM

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ  ಗುರುವಾರದಿಂದ ಗುಟ್ಕಾ ಮಾರಾಟ ನಿಷೇಧ ಮುಂದುವರಿದಿದೆ. ಮಮತಾ ಬ್ಯಾನರ್ಜಿ ಸರಕಾರವು ಪಶ್ಚಿಮ ಬಂಗಾಳದಲ್ಲಿ 2013ರಲ್ಲಿ ಮೊದಲ ಬಾರಿಗೆ ಗುಟ್ಕಾ ಮತ್ತು ಪಾನ್ ಮಸಾಲಾಗಳ ಮೇಲೆ ನಿಷೇಧ ಹೇರಿತ್ತು. 5 ವರ್ಷಗಳ ಬಳಿಕ ಮತ್ತೆ ಇನ್ನೂ ಒಂದು ವರ್ಷದ ಅವಧಿಗೆ ಗುಟ್ಕಾ ಮತ್ತು ಪಾನ್ ಮಸಾಲಾ ಮಾರಾಟದ ಮೇಲಿನ ನಿಷೇಧವನ್ನು ವಿಸ್ತರಿಸಿದೆ.ರಾಜ್ಯದಲ್ಲಿ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ಕುಟುಂಬ ಇಲಾಖೆಯ ಆಹಾರ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ರಾಜ್ಯದಲ್ಲಿ ನಿಕೋಟಿನ್ ಹೊಂದಿರುವ ಸಿಗರೇಟ್ ಉತ್ಪನ್ನಗಳ ಮೇಲೆ ನಿಷೇಧ ವಿಧಿಸಿಲ್ಲ.

Advertisement
Advertisement

2013 ರಲ್ಲಿ  ಬಹುತೇಕ ರಾಜ್ಯಗಳು ಗುಟ್ಕಾ ನಿಷೇಧಕ್ಕೆ ಮುಂದಾಗಿದ್ದವು. ಈ ಸಂದರ್ಭ ಮಮತಾ ಬ್ಯಾನರ್ಜಿ ಸರಕಾರವ ಮೊದಲ ಬಾರಿಗೆ ಗುಟ್ಕಾ ನಿಷೇಧ ಮಾಡಿತ್ತು. ಬಳಿಕ  ಬಿಹಾರ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ರಾಜಸ್ಥಾನ ನಿಷೇಧ ಮಾಡಿದರೆ 2013ರಲ್ಲಿ ರಾಜ್ಯದಲ್ಲೂ ಗುಟ್ಕಾ ನಿಷೇಧ ಮಾಡಲಾಗಿತ್ತು, ಬಳಿಕ ತೀವ್ರ ಪ್ರತಿಭಟನೆ ಹಾಗೂ ಹೋರಾಟದ ಫಲವಾಗಿ ನಿಷೇಧವನ್ನು ಹಿಂಪಡೆಯಲು ತೀರ್ಮಾನಿಸಲಾಗಿತ್ತು. ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳ ಪ್ರತ್ಯೇಕ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

Advertisement

ಈಗಾಗಲೇ ತಂಬಾಕು, ನಿಕೋಟಿನ್, ಮ್ಯಾಗ್ನೇಷಿಯಂ ಕಾರ್ಬೊನೇಟ್ ಮತ್ತು ಮಿನರಲ್ ಆಯಿಲ್ ಹೊಂದಿರುವ ಪಾನ್ ಮಸಾಲಾಗಳನ್ನು ಸಂಪೂರ್ಣವಾಗಿ ನಿಷೇಧಿಸಿವೆ. ಒಟ್ಟು 24 ರಾಜ್ಯಗಳಲ್ಲಿ ಈ ನಿಷೇಧ ಭಾಗಶಃ ಜಾರಿಯಲ್ಲಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror