ಪಶ್ಚಿಮ ವಾಹಿನಿ : 8 ಕಿರು ಅಣೆಕಟ್ಟು ಕಾಮಗಾರಿ ಪ್ರಗತಿಯಲ್ಲಿ

September 12, 2019
11:00 AM

ಮಂಗಳೂರು : ರಾಜ್ಯದ ಕರಾವಳಿಯಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಜಾರಿಗೆ ತಂದಿರುವ ಪಶ್ಚಿಮ ವಾಹಿನಿ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕಿಂಡಿ ಅಣೆಕಟ್ಟು ಕಾಮಗಾರಿಗಳು ಪ್ರಗತಿಯಲ್ಲಿದೆ.

Advertisement
Advertisement
Advertisement
Advertisement

ಬುಧವಾರ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಮಾಹಿತಿ ನೀಡಿದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಈ ಅಣೆಕಟ್ಟುಗಳ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮುಂದಿನ ವರ್ಷದ ಮಾರ್ಚ್ ಒಳಗೆ ಕಾಮಗಾರಿ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಕಡಿರುದ್ಯಾವರ, ನಿಡ್ಡೋಡಿ, ನಿಟ್ಟಡೆ, ಮಾರೂರು, ಕೊಳವೂರು, ಪುಚ್ಚಮೊಗರು, ಕರ್ಪೆ, ಪೊಳಲಿ, ಚಾರ್ವಾಕದಲ್ಲಿ ಈ ಕಾಮಗಾರಿಗಳು ನಡೆಯುತ್ತಿವೆ. ಬಿಳಿಯೂರು ಹಾಗೂ ಹರೇಕಳದಲ್ಲಿ ಕಾಮಗಾರಿ ಶೀಘ್ರವೇ ಆರಂಭವಾಗಲಿದೆ ಎಂದು ತಿಳಿಸಿದರು.

Advertisement

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಬಗ್ಗೆ ಒಂದು ವಾರದೊಳಗೆ ಸಂಬಂಧಪಟ್ಟ ಅಂಗನವಾಡಿಗಳಿಗೆ ಭೇಟಿ ನೀಡಿ ವರದಿ ನೀಡಲು ಸೂಚಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸೂರಿ ಪಂಜ ಮಾತನಾಡಿ, ನಗರದ ಲೇಡಿಘೋಷನ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸಂದರ್ಭಗಳಲ್ಲಿ ವೆನ್‍ಲಾಕ್‍ಗೆ ವರ್ಗಾಯಿಸಿದ ಸಂದರ್ಭದಲ್ಲಿ ಅಲ್ಲಿ ದಾಖಲಿಸಲು ವಿಳಂಭ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಇದಕ್ಕೆ ಆಸ್ಪದೆ ನೀಡದೇ ಎರಡೂ ಆಸ್ಪತ್ರೆಗಳು ರೋಗಿಯನ್ನು ವರ್ಗಾಯಿಸುವ ಮೊದಲೇ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಿದ ನಂತರ ವರ್ಗಾಯಿಸಬೇಕು ಎಂದು ಸೂಚಿಸಿದರು.

Advertisement

ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ 387 ಹೆಕ್ಟೇರ್ ಭತ್ತದ ಕೃಷಿ ನಾಶವಾಗಿದೆ. ಈಗಾಗಲೇ ಈ ನಷ್ಟವನ್ನು ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಪ್ರತೀ ಹೆಕ್ಟೇರ್ ನಷ್ಟಕ್ಕೆ ರೂ. 6800 ಪರಿಹಾರ ದೊರಕಲಿದೆ ಎಂದು ಕೃಷಿ ಇಲಾಖೆ ಜಂಟೀ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾಮಗಾರಿಗಳಿಗೆ ರೂ. 10.28 ಕೋಟಿ ರೂ. ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಡಿಡಿಪಿಐ ಶಿವರಾಮಯ್ಯ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror