ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

January 31, 2020
6:31 AM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ.
ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು ಬಲಿಯಾಗದಂತೆ ಈ ಮೂಲಕ ಎಚ್ಚರಿಸಿದೆ.

ಆದ್ದರಿಂದ ಸದರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಯಾವುದೇ ಶುಲ್ಕ ವಿಧಿಸುತ್ತಿಲ್ಲ.  ಅಲ್ಲದೇ ಈ ಬಗ್ಗೆ ಯಾವುದೇ ಖಾಸಗಿ ವ್ಯಕ್ತಿ / ಏಜೆಂಟ್ ನೇಮಿಸಿಲ್ಲ ಎಂದು ಇಲಾಖೆಯು ಸಾರ್ವಜನಿಕರಿಗೆ ಈ ಮೂಲಕ ಸ್ಪಷ್ಟಪಡಿಸಿದೆ.

ಯೋಜನೆಗಳ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ,  ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರಿಯಲ್ ಎಸ್ಟೇಟ್, ಎಯ್ಯಾಡಿ, ಮಂಗಳೂರು-575008.  ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ದ.ಕ., ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror