ಪುಣ್ಚಪ್ಪಾಡಿ ಶಾಲೆಯಲ್ಲಿ ಬಣ್ಣದ ಹಾಡಿನ ಮುಕ್ತಾಯ ಸಮಾರಂಭ

April 15, 2019
11:16 AM

ಸವಣೂರು: ಮಕ್ಕಳ ಕನಸಿನ ತಿಜೋರಿಯನ್ನು ಗಟ್ಟಿಗೊಳಿಸೋಣ ಎಂದು ಶಿಕ್ಷಣ ಇಲಾಖೆಯ ರಾಜ್ಯ ಸಂಪನ್ಮೂಲ ವ್ಯಕ್ತಿ ರಮೇಶ್ ಉಳಯ ಹೇಳಿದರು.
ಅವರು ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ಮೂರು ದಿನಗಳ ಕಾಲ ನಡೆದ ಬಣ್ಣದ ಹಾಡು ಎಂಬ ವಿಭಿನ್ನ ಮಕ್ಕಳ ರಂಗ ಶಿಬಿರದ ಸಮಾರೋಪ ಮಾತುಗಳನ್ನಾಡಿದರು. ಪ್ರತಿಯೊಬ್ಬ ಮಗುವು ಕೂಡ ಬುದ್ದಿವಂತ ಮಗುವೇ ಆಗಿರುತ್ತಾನೆ ಅವರ ಭೌದ್ಧಿಕ ವಿಕಾಸಕ್ಕೆ ಅವಕಾಶ ಮತ್ತು ಪ್ರೋತ್ಸಾಹ ಬೇಕಾಗಿದೆ. ಮಕ್ಕಳು ಕನಸಿನ ಚಿಲುಮೆಗಳು ಅವರ ಕನಸಿನ ಪೆಟ್ಟಿಗೆಯನ್ನು ಗಟ್ಟಿಗೊಳಿಸುವ ಕೆಲಸಗಳು ಇಂತಹ ಮಕ್ಕಳ ಕೂಟಗಳಿಂದ ಸಾಧ್ಯ ಎಂದರು.

Advertisement
Advertisement

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಆಳ್ವಾಸ್ ಮೂಡಬಿದಿರೆಯ ಕಲಾಶಿಕ್ಷಕ ಭಾಸ್ಕರ್ ನೆಲ್ಯಾಡಿ, ಸಂಪನ್ಮೂಲ ವ್ಯಕ್ತಿ ಮುಕ್ವೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಚರಣ್ ಕುಮಾರ್ ಪುದು, ಸಂಪನ್ಮೂಲ ವ್ಯಕ್ತಿ ಶ್ರವಣ ರಂಗ ಪ್ರತಿಷ್ಟಾನ ಸವಣೂರಿನ ಸಂಚಾಲಕರಾದ ತಾರನಾಥ ಸವಣೂರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಊರಿನ ಹಿರಿಯರಾದ ಪಿ.ಡಿ ಗಂಗಾದರ್ ರೈ ಯವರು ಮಾತನಾಡಿದರು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮಾಶಂಕರ ಗೌಡ, ಪೋಷಕರಾದ ಬಾಬು ಎನ್ ಜರಿನಾರು ವಿದ್ಯಾರ್ಥಿಗಳಾದ ದೀಪ್ತಿ, ತೇಜಸ್ವಿ, ನಿತೀಶ್, ಪಿ. ಆರ್. ಮೋಕ್ಷಿತ್ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.
ಮುಖ್ಯ ಶಿಕ್ಷಕರಾದ ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು ಶಿಕ್ಷಕರಾದ ಶೋಭಾ ಕೆ, ಪ್ಲಾವಿಯಾ, ಯತೀಶ್ ಕುಮಾರ್, ಪ್ರತಿಮಾ ಎನ್,ಯಮುನಾ ಬಿ, ಸಹಕರಿಸಿದರು.ಶಿಕ್ಷಕರಾದ ನಾರಯಣ ರೈ ಕುಕ್ಕುವಳ್ಳಿ,ಭಾಸ್ಕರ್ ನೆಲ್ಯಾಡಿ,ಶಿವಗಿರಿ ಕಲ್ಲಡ್ಕ,ರೋಹಿಣಿ ರಾಘವಾ , ಜಗನ್ನಾಥ್ ಅರಿಯಡ್ಕ,ಪ್ರದೀಪ್ ಪಾಣಾಜೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group