ಪುತ್ತೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಕಠಿಣ ಕ್ರಮಕ್ಕೆ ಎಬಿವಿಪಿ ಒತ್ತಾಯ

July 3, 2019
6:22 PM

ಪುತ್ತೂರು: ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆಗೆ ನಡೆಸಿ ಕಠಿಣ ಕ್ರಮ ನಡೆಸಲು  ಆಗ್ರಹಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಘಟಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.

Advertisement
Advertisement

ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿರುವ ಪುತ್ತುರು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣರವನ್ನು  ಇಲಾಖೆ ಗಂಭೀರವಾಗಿ ಪರಿಗಣಿಸಿ  ಸಮಗ್ರ ತನಿಖೆ ನಡೆಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ.   ಈ ಪ್ರಕರಣವನ್ನು ಮುಂದಿಟ್ಟು ಕೆಲವು ಕಿಡಿಗೇಡಿಗಳು ಆರೋಪಿ ಎಬಿವಿಪಿ ಕಾರ್ಯಕರ್ತರು ಎಂಬ ಅಪಪ್ರಚಾರವನ್ನು  ಮಾಡುತ್ತಿರುವುದು  ಕಂಡುಬಂದಿದೆ> ಈ ಪ್ರಕರಣ ಆರೋಪಿಗಳಿಗೂ ಎಬಿವಿಪಿಗೂ  ಸಂಬಂಧವಿಲ್ಲ.  ಹೀಗಿದ್ದರೂ ಆರೋಪಿಗಳ ಜೊತೆ ಸಂಘಟನೆಯ ಹೆಸರನ್ನು ಸೇರಿಸಿ ಅಪಪ್ರಚಾರ ನಡೆಸುವುದರಿಂದ ಸಂಘಟನೆಯ ಘನತೆಗೆ ಧಕ್ಕೆ ಬಂದಿದೆ. ಇಲಾಖೆ ಈ ಕೂಡಲೇ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು  ಮನವಿಯಲ್ಲಿ  ಎಬಿವಿಪಿ ನಗರ ಕಾರ್ಯದರ್ಶಿ  ಶಿವಪ್ರಸಾದ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಖಂಡಿಸುತ್ತೇವೆ ಮತ್ತು  ಅತ್ಯಾಚಾರಿಗಳ ವಿರುದ್ಧ ಕಠಿನ ಶಿಕ್ಷೆಗೆ ಆಗ್ರಹಿಸುತ್ತೇವೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂ.22 : ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ
June 19, 2025
7:27 PM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ
June 17, 2025
10:12 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?
June 17, 2025
11:24 AM
by: The Rural Mirror ಸುದ್ದಿಜಾಲ
ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ
June 14, 2025
9:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group