ಪುತ್ತೂರು ಜಾತ್ರೋತ್ಸವದಲ್ಲಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ

April 19, 2019
4:26 AM

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಬುಧವಾರ ರಾತ್ರಿ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಪ್ರದರ್ಶನ ನಡೆಯಿತು. ಲಕ್ಷಾಂತರ ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ಶ್ರೀ ದೇವಾಲಯದ ಹೊರಾಂಗಣದಲ್ಲಿ ಶ್ರೀ ಉಳ್ಳಾಲ್ತಿ ದೈವ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಸಾಂಪ್ರದಾಯಿಕ ಭೇಟಿ ನಡೆಯಿತು.
ಬುಧವಾರ ಶ್ರೀ ದೇವಾಲಯದ ಒಳಾಂಗಣದಲ್ಲಿ ಬೆಳಗ್ಗೆ ದೇವಾಲಯದ ಆಚಾರ್ಯ ಬ್ರಹ್ಮಶ್ರೀ ಕುಂಟಾರು ಶ್ರೀಧರ ತಂತ್ರಿಗಳ ಧಾರ್ಮಿಕ ನೇತೃತ್ವದಲ್ಲಿ ಉತ್ಸವ ನಡೆಯಿತು. ಬುಧವಾರದ ಉತ್ಸವದಲ್ಲಿ ಮಾಮೂಲಿ ಸುತ್ತುಗಳಲ್ಲದೆ ಶಂಖಸುತ್ತು, ಭಜನೆ ಸುತ್ತು ಮತ್ತು ಹೆಚ್ಚುವರಿ ವಾದ್ಯ ಸುತ್ತುಗಳು ಇರುತ್ತವೆ. ಈ ಉತ್ಸವ ಸಂದರ್ಭ ವಸಂತ ಕಟ್ಟೆ ಪೂಜೆ ನಡೆಯುತ್ತದೆ. ದರ್ಶನ ಬಲಿ ಸುತ್ತು ನಡೆದ ಬಳಿಕ ಬಟ್ಟಲು ಕಾಣಿಕೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಶ್ರೀ ದೇವರ ದರ್ಶನ ಬಲಿ ಉತ್ಸವಕ್ಕೆ ಮತ್ತು ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ್ದ 15ಸಾವಿರಕ್ಕೂ ಹೆಚ್ಚು ಮಂದಿ ಗುರುವಾರ ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.
ದೇವಾಲಯದ ಒಳಾಂಗಣದಲ್ಲಿ ಗೋಪುರದಲ್ಲಿ ಮತ್ತು ನೆಲದಲ್ಲಿ ಕುಳಿತು ದರ್ಶನ ಬಲಿ ಉತ್ಸವವನ್ನು ವೀಕ್ಷಿಸಲು ಬಂದಿದ್ದ ಸಾವಿರಾರು ಮಂದಿ ಭಕ್ತರಿಗೆ ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ವತಿಯಿಂದ ಮಜ್ಜಿಗೆ ವಿತರಣೆ ನಡೆಯಿತು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group