ಪುಸ್ತಕ ಜೋಳಿಗೆ ತುಂಬಿ ಶಾಲೆ ಪ್ರಾರಂಭ : ಸರಕಾರಿ ಶಾಲೆಯಲ್ಲಿ ವಿನೂತನ ಪ್ರಯೋಗ

May 29, 2019
7:28 AM

ಸವಣೂರು: ಈ ಸರಕಾರಿ ಶಾಲೆಯಲ್ಲಿ  ಜೀವಂತಿಕೆ ಇದೆ. ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಸಿ ಶಾಲೆಯ ಮಕ್ಕಳನ್ನು ಕ್ರಿಯೇಟಿವ್ ಮಾಡುತ್ತಾರೆ. ಸದಾ ಚಟುವಟಿಕೆಯಲ್ಲಿ ಇರುವಂತೆ ಮಾಡುತ್ತಾರೆ. ಈ ಬಾರಿ ಪುಸ್ತಕ ಜೋಳಿಗೆ ತುಂಬುವ ಮೂಲಕ ಶಾಲೆ ಪುನರಾರಂಭ ಮಾಡುತ್ತಿದ್ದಾರೆ. ಮಕ್ಕಳಿಗೆ ಓದುವ ರುಚಿ ಹತ್ತಿಸುತ್ತಿದ್ದಾರೆ. ಇದು  ಸ.ಹಿ.ಪ್ರಾ.ಶಾಲೆ ಪುಣ್ಚಪ್ಪಾಡಿ.

ಪುತ್ತೂರು ತಾಲೂಕಿನ ಸುಳ್ಯ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಶಾಲೆ ಇದು. ಎಲ್ಲಾ ಜನಪ್ರತಿನಿಧಿಗಳೂ, ಅಧಿಕಾರಿಗಳು,  ಶಿಕ್ಷಣ ಪ್ರೇಮಿಗಳು ಈ ಶಾಲೆಯನ್ನು ಗಮನಿಸುತ್ತಲೇ ಇರಬೇಕು. ಒಂದು ಸರಕಾರಿ ಶಾಲೆಯನ್ನು  ಹೇಗೆ ಲೈವ್ ಆಗಿ ಇಡಬಹುದು  ಹಾಗೂ ಮಕ್ಕಳನ್ನು  ಹೇಗೆ ಕ್ರಿಯೇಟಿವ್ ಆಗಿ ಬೆಳೆಸಬಹುದು ಎಂಬುದಕ್ಕೆ ಈ ಶಾಲೆ ಮಾದರಿ.

ಕಳೆದ ಮೂರು ವರ್ಷಗಳಿಂದ ಅಕ್ಷರ ರಥ, ಕಲಿಕಾ ಪಲ್ಲಕ್ಕಿ, ಕಲಿಕಾ ಮಂಟಪ ಹೀಗೆ ವಿಶಿಷ್ಟವಾಗಿ ಪ್ರಾರಂಭೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಪುಣ್ಚಪ್ಪಾಡಿ ಶಾಲೆಯು ಈ ವರ್ಷ  ವಿನೂತನವಾಗಿ ಪುಸ್ತಕ ಜೋಳಿಗೆಯಾಗಿ ಆಚರಿಸಲು ಅಣಿಯಾಗಿದೆ. ನೂತನ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳುತ್ತಾ, ಶಾಲೆಗೆ ದಾಖಲಾಗುವ ಮಕ್ಕಳು ಪುಸ್ತಕ ಜೋಳಿಗೆಗೆ ಪುಸ್ತಕವನ್ನು ತುಂಬಿ ದಾಖಲಾತಿ ಹೊಂದಲಿದ್ದಾರೆ. ಶಾಲೆಯ ಪೋಷಕರೂ ಪುಸ್ತಕ ಜೋಳಿಗೆಯ ತುಂಬಲಿದ್ದಾರೆ. ಪುಸ್ತಕ ಜೋಳಿಗೆಯನ್ನು ಶಾಲೆಯಂಗಳದಲ್ಲಿ ಮಾಡುತ್ತಾರೆ. ನಾಳೆ ಹೊಸದಾಗಿ ದಾಖಲಾಗುವ 1 ನೇ ತರಗತಿಯ ಎಲ್ಲಾ ಮಕ್ಕಳು ಶಾಲಾ ಗ್ರಂಥಾಲಯಕ್ಕೆ ಬಳಸುವಂತಹ ಪುಸ್ತಕಗಳನ್ನು ಮನೆಯಿಂದಲೇ ತಂದು ಜೋಳಿಗೆಯನ್ನು ತುಂಬುತ್ತಾರೆ.

ಪುಸ್ತಕ ಜೋಳಿಗೆಯ ಮೂಲಕ ಶಾಲಾ ಗ್ರಂಥ ಭಂಡಾರಕ್ಕೆ ಪುಸ್ತಕದಾನ ನೀಡುವ ಪರಿಕಲ್ಪನೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಹಿರಿಯ ಸಾಹಿತಿ ಬಿ. ಪುರಂದರ ಭಟ್ ,  ಅಂಕಣಕಾರರು, ಹಿರಿಯ ಸಾಹಿತಿ  ಪ್ರೊ.ವಿ.ಬಿ.ಅರ್ತಿಕಜೆ , ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಹಾಗೂ ಇನ್ನೂ ಹಲವಾರು ಮಂದಿ ಪುಸ್ತಕಗಳನ್ನು ನೀಡಿದ್ದಾರೆ.

ಈ ಪುಸ್ತಕಗಳನ್ನು  ಮಕ್ಕಳಿಗೆ ಹಂತ ಹಂತವಾಗಿ ಓದಿಸುವುದು  ಹಾಗೂ ಶಾಲಾ ಗ್ರಂಥಾಲಯವನ್ನು ಜೋಪಾನವಾಗಿರಿಸಿ ಹಿರಿಯ ಮಕ್ಕಳಿಂದ ಓದಿಸುವುದು ಸೇರಿದಂತೆ ಮಕ್ಕಳಿಗೆ ಪುಸ್ತಕದ ಬಗ್ಗೆ ಪ್ರೀತಿ ಮೂಡಿಸುವ ಯೋಜನೆ ಈ ಶಾಲೆಯದ್ದಾಗಿದೆ.

ಅಂದ ಹಾಗೆ ಈ  ಶಾಲೆಗೆ ಪುಸ್ತಕ ನೀಡಿ ಪುಸ್ತಕ ಜೋಳಿಗೆಯನ್ನು ನೀವೂ ತುಂಬಬಹುದು. ನಿಮ್ಮಲ್ಲೊಂದು ಒಳ್ಳೆಯ ಪುಸ್ತಕ ಇದ್ದರೆ ನೀಡಬಹುದು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!
August 30, 2026
5:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror