ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆ

December 25, 2019
4:01 PM

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ‌. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು. ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ‌ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ‌ ಎಂದು ಅವಿನಾಶ್ ವಿವರಿಸಿದರು. ಶ್ರೀಗಳಿಗೆ ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.

ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ‌.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ‌ ನಡೆಯುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror