ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲೂ ಅಂಗೀಕಾರ

December 11, 2019
10:09 PM

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.

Advertisement

ರಾಜ್ಯಸಭೆಯಲ್ಲಿ ಸತತ ಏಳುಗಂಟೆ ಚರ್ಚೆ ನಡೆದ ಬಳಿಕ ಬಿಲ್​ ಪಾಸ್​ ಆಗಿದೆ. ಮುಂದಿನ ಹಂತದಲ್ಲಿ ರಾಷ್ಟ್ರಪತಿಯಿಂದ ಮಸೂದೆಗೆ ಅಂಕಿತ ದೊರೆತ ಕೂಡಲೇ ಕಾಯ್ದೆಯಾಗಿ ಪರಿವರ್ತನೆಯಾಗಲಿದೆ. ಪೌರತ್ವ ತಿದ್ದುಪಡಿ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳಿಸಲು ವಿರೋಧಿಸಿ 124 ಎಂಪಿಗಳು ಹಾಗೂ ಕಳಿಸಬೇಕು ಎಂದು ಪರವಾಗಿ 99 ಎಂಪಿಗಳು ಮತ ಚಲಾಯಿಸಿದರು. ಹಾಗಾಗಿ ಮಸೂದೆ ಆಯ್ಕೆ ಸಮಿತಿಗೆ ಕಳಿಸುವುದನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಲಾಯಿತು.

ಇಂದು ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್​ ಷಾ ಅವರು ಮಸೂದೆ ಮಂಡನೆ ಮಾಡಿದರು. ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ವಿರೋಧಿಸಿದವು. ಬಿಲ್​ ಮಂಡನೆಗೂ ಮೊದಲಿನಿಂದಲೇ ಈಶಾನ್ಯ ಭಾರತದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ಲೋಕಸಭೆಯಲ್ಲಿ ಬಿಲ್​ ಮಂಡನೆಯಾದ ಬಳಿಕ 12 ತಾಸು ಚರ್ಚೆ ನಡೆದಿತ್ತು. ಕೊನೆಗೂ ಬಿಲ್​ ಪರವಾಗಿ 311 ಸಂಸದರು, ವಿರೋಧವಾಗಿ 80 ಮಂದಿ ಮತ ಹಾಕುವ ಮೂಲಕ ಮಸೂದೆ ಅಂಗೀಕಾರವಾಗಿತ್ತು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group