ಟೆಸ್ಟ್ ಕ್ರಿಕೆಟ್ ಪಂದ್ಯಾಟ : ಕನ್ನಡಿಗ ಮಯಾಂಕ್​ ಅಗರ್​ವಾಲ್ ಭರ್ಜರಿ ದ್ವಿಶತಕ: ಬೃಹತ್ ಮೊತ್ತ ಪೇರಿಸಿದ ಭಾರತ

October 3, 2019
9:04 PM

ವಿಶಾಖಪಟ್ಟಣ: ಆರಂಭಿಕ ಆಟಗಾರರಾದ ಕನ್ನಡಿಗ ಮಾಯಾಂಕ್ ಅಗರ್​ವಾಲ್ ಭರ್ಜರಿ ದ್ವಿಶತಕ (215)ಮತ್ತು ರೋಹಿತ್ ಶರ್ಮ ಭರ್ಜರಿ ಶತಕದ(176) ನೆರವಿನಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮೊದಲ ಟೆಸ್ಟ್​ನಲ್ಲಿ ಭಾರತ ಬೃಹತ್ ಮೊತ್ತ ದಾಖಲಿಸಿದೆ.

ಏಳು ವಿಕೆಟ್ ಗೆ 502 ರನ್ ಗಳಿಸಿ ಭಾರತ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಎರಡನೇ ದಿನದ ಆಟದ ಮುಕ್ತಾಯಕ್ಕೆ ದಕ್ಷಿಣ ಆಫ್ರಿಕಾ ಮೂರು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಮೈದಾನದಲ್ಲಿ ಬುಧವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್​ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಯ್ಲಿ​ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಹೊಸ ಆರಂಭಿಕ ಜೋಡಿಯಾಗಿ ಕಣಕ್ಕಿಳಿದ ರೋಹಿತ್​ ಶರ್ಮಾ ಮತ್ತು ಕನ್ನಡಿಗ ಮಯಾಂಕ್​ ಅಗರ್​ವಾಲ್​ ಪ್ರಥಮ ದಿನ ಪೂರ್ತಿ ಆಡಿ 59.1 ಓವರ್​ಗಳಲ್ಲಿ 202ರನ್​ ಗಳಿಸಿದ್ದರು. ರೋಹಿತ್ ಶರ್ಮ115 ರನ್​, ಮಯಾಂಕ್​ 84 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರು.

ಗುರುವಾರ ಆಟ ಮುಂದುವರಿಸಿದ ಈ ಜೋಡಿ ಮೊದಲ ವಿಕೆಟ್ ಗೆ ಬರೋಬ್ಬರಿ 317 ರನ್​ ಗಳಿಸಿತು. ಈ ಮೂಲಕ 2004ರಲ್ಲಿ ಕಾನ್ಪುರದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಆರಂಭಿಕ ಜೋಡಿಯಾಗಿದ್ದ ವಿರೇಂದ್ರ ಸೆಹ್ವಾಗ್ ಹಾಗೂ ಗೌತಮ್​ ಗಂಭೀರ್ ಗಳಿಸಿದ್ದ 218 ರನ್​ಗಳ ದಾಖಲೆಯನ್ನು ಮುರಿದರು. ಅದೇ ರೀತಿ 300ಕ್ಕೂ ಹೆಚ್ಚು ರನ್​ ಜೊತೆಯಾಟ ನೀಡಿದ ​ ಮೂರನೇ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಆರಂಭಿಕನಾಗಿ ಬ್ಯಾಟ್ ಮಾಡಲು ಕಣಕ್ಕೆ ಇಳಿದ ಕನ್ನಡಿಗ ಮಯಾಂಕ್ ಅಗರ್​ವಾಲ್​ ಅವರ ಮೊದಲ ದ್ವಿಶತಕ ಇದಾಗಿದ್ದು 371 ಬಾಲ್​ಗಳಲ್ಲಿ 22 ಬೌಂಡರಿ ಮತ್ತು 5 ಸಿಕ್ಸರ್ ಸಹಿತ 215 ರನ್​ ಗಳಿಸಿದರು. ರೋಹಿತ್ ಶರ್ಮಾ 244 ಬಾಲ್ ಗಳಲ್ಲಿ 23 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಿಂದ 176 ರನ್​ ಗಳಿಸಿ ಔಟಾದರು‌. ಇನ್ನುಳಿದಂತೆ ಚೇತೇಶ್ವರ್​ ಪೂಜಾರಿ 6 ರನ್​, ವಿರಾಟ್​ ಕೊಹ್ಲಿ 20, ಅಜಿಂಕ್ಯ ರಹಾನೆ 15, ಹನುಮ ವಿಹಾರಿ 10, ವೃದ್ಧಿಮಾನ್​ ಸಾಹಾ 21 ರನ್​ ಗಳಿಸಿ ಔಟಾದರು. ರವೀಂದ್ರ ಜಡೇಜಾ (30), ರವಿಚಂದ್ರನ್​ ಅಶ್ವಿನ್​ (1) ಔಟಾಗದೆ ಉಳಿದರು.

ಮೊದಲ ಇನ್ನಿಂಗ್ಸ್​ ಆರಂಭಿಸಿದ ದ.ಆಫ್ರಿಕಾ ಎರಡನೇ ದಿನದ ಅಂತ್ಯಕ್ಕೆ 20 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 39 ರನ್​ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ. ಭಾರತದ ಪರ ರವಿಚಂದ್ರನ್ ಅಶ್ವಿನ್ ಎರಡು ಮತ್ತು ರವೀಂದ್ರ ಜಡೇಜ ಒಂದು ವಿಕೆಟ್ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror