ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ಭಾಜನರಾಗೋಣ

September 23, 2019
8:58 PM

ಬೆಳ್ಳಾರೆ: ನಮ್ಮ ಜೀವಿತಾವಧಿಯಲ್ಲಿ ಪ್ರಾಮಾಣಿಕತೆಯಿಂದ ಸಮುದಾಯದ ಪ್ರೀತಿಗೆ ನಾವೆಲ್ಲರೂ ಭಾಜನರಾಗೋಣ. ರೋಟರಿಯು ವಿದ್ಯಾರ್ಥಿಗಳ ಸಬಲೀಕರಣಕ್ಕೆ ಉನ್ನತಮಟ್ಟದಲ್ಲಿ ಶ್ರಮಿಸುತ್ತಿದ್ದು, ಇದಕ್ಕೆ ಕೈಜೋಡಿಸುತ್ತಿರುವ ಸದಾಶಿವ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವ ಅಭಿನಂದನಾರ್ಹ ಎಂದು ರೋಟರಿ ಜಿಲ್ಲಾ 3181ರ ಟಿ.ಇ.ಎ.ಚಿ.ಹೆಚ್ ಜಿಲ್ಲಾ ಚೇರ್ಮನ್ ರಾಮಕೃಷ್ಣ ಮಲ್ಲಾರ ಹೇಳಿದರು.

ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಹಾಗು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಬೆಳ್ಳಾರೆ ಕೆಪಿಎಸ್ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಬಿ.ನರಸಿಂಹ ಜೋಶಿ ರೋಟರಿ ಸಂಸ್ಥೆಯ ಕಾರ್ಯವೈಖರಿಯನ್ನು ಮಕ್ಕಳಿಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ವಹಿಸಿದರು. ವೇದಿಕೆಯಲ್ಲಿ ಕೆಪಿಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ, ಡಾ| ಶ್ರೇಯಸ್ ಭಾರಧ್ವಾಜ್ ಉಪಸ್ಥಿತರಿದ್ದರು. ಬಿ. ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಶ್ರೀರಾಮ್ ಪಾಟಾಜೆ ವಂದಿಸಿದರು. ಉಪನ್ಯಾಸಕ ರಾಮಚಂದ್ರ ಮುಗುಳಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅರ್ಹ 60 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಬೆಳ್ಳಾರೆ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ ವಿತರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror