ಫೆ.1 ರಿಂದ ವಳಲಂಬೆ ಜಾತ್ರೋತ್ಸವ : ಗೊನೆ ಮುಹೂರ್ತ

January 25, 2020
9:08 AM

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.

Advertisement
Advertisement

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ  ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.

ಫೆ.2 ರಂದು  ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.

Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group