ಫೆ. 8 : ಪೆರ್ಲ ನಾಲಂದ ಕಾಲೇಜಿನಲ್ಲಿ ಬೃಹತ್ ‘ಕೃಷಿ ಮೇಳ’

January 29, 2020
7:36 AM

ಪೆರ್ಲ: ಪೆರ್ಲ ನಾಲಂದ ಮಹಾವಿದ್ಯಾಲಯ, ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಹಾಗೂ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಫೆ. 8 ಶನಿವಾರ ಪೆರ್ಲ ನಾಲಂದ ಕಾಲೇಜು ಆವರಣದಲ್ಲಿ ಬೃಹತ್ ‘ಕೃಷಿ ಮೇಳ’ ನಡೆಯಲಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ. ಟಿ. ರವಿ ಸಮಾರಂಭ ಉದ್ಘಾಟಿಸಲಿದ್ದಾರೆ.

ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷ ಸತೀಶ್ಚಂದ್ರ ಎಸ್. ಆರ್. ದಿಕ್ಸೂಚಿ ಭಾಷಣ ಮಾಡಲಿದ್ದು, ಕಾಸರಗೋಡು ಎ. ಆರ್. ಜನರಲ್ ಜಯಚಂದ್ರನ್ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

10.55ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಅಧ್ಯಕ್ಷತೆಯಲ್ಲಿ ಅಡಿಕೆ ಕೃಷಿಯಲ್ಲಿ ಆಧುನಿಕತೆ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ಕಾಸರಗೋಡು ಐಸಿಎಆರ್- ಸಿಪಿಸಿಆರ್ ಐ, ಡಾ. ರವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ (ಲಿ), ನೀರ್ಚಾಲು ಇದರ ಅಧ್ಯಕ್ಷ ಜಯದೇವ ಖಂಡಿಗೆ ಹಾಗೂ ರಾಧಾಕೃಷ್ಣ ಭಂಡಾರದಮನೆ- ಖಂಡೇರಿ ಉಪಸ್ಥಿತರಿರುವರು.

ಮಧ್ಯಾಹ್ನ 12.05 ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಪದ್ಮರಾಜ ಪಟ್ಟಾಜೆ ಅಧ್ಯಕ್ಷತೆಯಲ್ಲಿ ಕೊಕ್ಕೊ ಕೃಷಿ ಸವಾಲುಗಳು ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ವಿಟ್ಲ ಸಿಪಿಸಿಆರ್ ಐ, ಡಾ. ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕ ಪೆರುವೋಡಿ ಸದಾನಂದ ಆಳ್ವ ಉಪಸ್ಥಿತರಿರುವರು.

ಅಪರಾಹ್ನ 1.05 ರಿಂದ ಲೇಖಕಿ ಕೃಷ್ಣವೇಣಿ ಕಿದೂರು ಅಧ್ಯಕ್ಷತೆಯಲ್ಲಿ ಕೈತೋಟ ಕೃಷಿಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಖ್ಯಾತ ಲೇಖಕಿ ಸವಿತಾ ಭಟ್ ಅಡ್ವಾಯಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕರಾದ ಪುಷ್ಪಾ ಕೊಮ್ಮಂಗಳ ಉಪಸ್ಥಿತರಿರುವರು.

2.15 ರಿಂದ ‘ಸುಭಿಕ್ಷಾ’, ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘ (ನಿ), ತೀರ್ಥಹಳ್ಳಿ ಇದರ ನಿರ್ದೇಶಕಿ ಸವಿತಾ ಬಾಳಿಕೆ ಅಧ್ಯಕ್ಷತೆಯಲ್ಲಿ ಸಾವಯವ ಕೃಷಿ ಪದ್ಧತಿ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಪ್ರಗತಿಪರ ಕೃಷಿಕ ದಾಮೋದರ ಉಜಾರ್ಲೆ ಉಪಸ್ಥಿತರಿರುವರು.

ಸಾಯಂಕಾಲ 3.30 ರಿಂದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ಜರಗಲಿದೆ. ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕೃಷಿ ಸಾಧಕರನ್ನು ಸನ್ಮಾನಿಸಲಿದ್ದಾರೆ.

ನಬಾರ್ಡ್ ಎ. ಜಿ. ಎಂ. ಜ್ಯೋತಿಷ್ ಜಗನ್ನಾಥ್ ಸಮಾರೋಪ ಭಾಷಣ ಮಾಡಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಹಾಗೂ ಪ್ರಗತಿಪರ ಕೃಷಿಕ ಡಾ. ಚಂದ್ರಶೇಖರ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಉಪಾಧ್ಯಕ್ಷ ಶಂ. ನಾ. ಖಂಡಿಗೆ ಉಪಸ್ಥಿತರಿರುವರು.

ಗೋಷ್ಠಿಗಳೊಂದಿಗೆ ಕೃಷಿ ಯಂತ್ರೋಪಕರಣಗಳು, ಬೀಜಗಳು, ನರ್ಸರಿ ಗಿಡಗಳು, ವಿವಿಧ ಕೃಷಿ ಉತ್ಪನ್ನಗಳು, ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ. ಸ್ಥಳೀಯ ಉತ್ತಮ ಕೃಷಿ ಉತ್ಪನ್ನಗಳ ( ಅಡಿಕೆ, ತೆಂಗು, ಕೊಕ್ಕೋ, ಬಾಳೆ ) ಪ್ರದರ್ಶನಕ್ಕೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror