“ಫೋನಿ” ಚಂಡಮಾರುತಕ್ಕೆ 5 ಬಲಿ

May 3, 2019
11:23 PM
ನವದೆಹಲಿ : ಒಡಿಸ್ಸಾದ ಸಮುದ್ರ ತೀರ ಪ್ರದೇಶಕ್ಕೆ ಗುರುವಾರ ಬೆಳಗ್ಗೆ ಅಪ್ಪಳಿಸಿದ  ಫೋನಿ ಚಂಡಮಾರುತ ಕೋಲಾಹಲ ಸೃಷ್ಠಿಸಿದೆ. ಶುಕ್ರವಾರ ಸಂಜೆಯ ವೇಳೆ ಒಟ್ಟು 5 ಮಂದಿ  ಫೋನಿ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಗ್ಗೆ ಪ್ರತಿ ಗಂಟೆಗೆ 200 ಕಿ. ಮೀ ವೇಗದಲ್ಲಿ ಪುರಿ ಪ್ರದೇಶದ  ಕಡಲ ತೀರಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ಮಧ್ಯಾಹ್ನದವರೆಗೂ ಒಡಿಶಾ ಕರಾವಳಿ ತೀರದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯನ್ನು ಸುರಿಸಿತು.  ನಂತರ ಇದೀಗ  ಚಂಡಮಾರುತ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ.  ಸದ್ಯ ಪ್ರತೀ ಗಂಟೆಗೆ 150-160 ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಹವಾಮಾನ ಇಲಾಖಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ಸದ್ಯ ಗಂಟೆಗೆ 80 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಾ ಈಶಾನ್ಯದತ್ತ ಚಂಡ ಮಾರುತದ ಪ್ರಭಾವ ಸಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಪೀಡಿತ ರಾಜ್ಯಗಳಿಗೆ ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?
August 1, 2026
8:00 AM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror