ಬನಾರಿ ಗೋಪಾಲಕೃಷ್ಣ ಯಕ್ಷ ಗಾನ ಕಲಾ ಸಂಘದ ಅಮೃತ ಮಹೋತ್ಸವ

May 6, 2019
8:30 AM

ಸುಳ್ಯ: ವಿನಮ್ರತೆ ಕಲಾವಿದನನ್ನು ಬಲು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿನಮ್ರತೆ ಮತ್ತು ಸಹನಶೀಲತೆಯಿಂದ ಯಕ್ಷಗಾನ ಕಲೆಯನ್ನೂ, ಕಲಾ ಸಂಘ ವನ್ನೂ ಕಟ್ಟಿ ಬೆಳೆಸಿದವರು ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಸ್ಮರಿಸಿದರು.

Advertisement
Advertisement

ದೇಲಂಪಾಡಿ ಬನಾರಿ ಶ್ರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಏಪ್ಪತ್ತೈದು ವರ್ಷಗಳ ಹಿಂದೆ ಸ್ಥಾಪನೆಯಾದ ಯಕ್ಷಗಾನ ಕಲಾ ಸಂಘ ಕಲಾವಿದರನ್ನು ಬೆಳೆಸಿ, ಕಲೆಯನ್ನು ಬೆಳಗಿಸಿದೆ. ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ ಕ್ರಾಂತಿಯನ್ನು ಮಾಡಲು ಸಾಧ್ಯವಾಗಿದೆ. ಇಂದಿಗೂ ಯಕ್ಷಗಾನ ಕಲೆ ಮತ್ತು ಕಲಾವಿದನ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯಎಂದು ಅವರು ಹೇಳಿದರು.

ಕೀರಿಕ್ಕಾಡು ಮಾಸ್ತರ್ ವಿಷ್ಣು ಭಟ್ ಸ್ಮರಣಾರ್ಥ ನೀಡುವ `ಕೀರಿಕ್ಕಾಡು ಪ್ರಶಸ್ತಿ’ಯನ್ನು ಹಿರಿಯ ಕಲಾವಿದ ಬಿ.ಗೋಪಾಲಕೃಷ್ಣ ಕುರುಪ್ ಶಿಶಿಲ ಅವರಿಗೆ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಅಭಿನಂದನಾ ಭಾಷಣ ಮಾಡಿದರು. ಹಿರಿಯ ಸಾಹಿತಿ ಪ್ರೊ.ವಿ.ಬಿ.ಅರ್ತಿಕಜೆ ಅಧ್ಯಕ್ಷತೆ ವಹಿಸಿದ್ದರು.

ಡಾ.ರಮಾನಂದ ಬನಾರಿ ರಚಿಸಿದ `ಹಾರಿಹೋದ ಹಕ್ಕಿ’ ಕೃತಿಯನ್ನು ಶ್ರೀ ಕೇಶವಾನಂದ ಭಾರತೀ ಸ್ವಾಮಿ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಕೃತಿಯ ಕುರಿತು ಮಾತನಾಡಿದರು.
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಕೀರಿಕ್ಕಾಡು ವನಮಾಲ ಕೇಶವ ಭಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಾಧ್ಯಕ್ಷ ಡಾ.ರಮಾನಂದ ಬನಾರಿ ಸ್ವಾಗತಿಸಿ ಪ್ರಸ್ತಾವನೆಗೈದರು. ಸದಾಶಿವ ರೈ ಬೆಳ್ಳಿಪ್ಪಾಡಿ ವಂದಿಸಿದರು. ನಾರಾಯಣ ದೇಲಂಪಾಡಿ ಮತ್ತು ಚಂದ್ರಶೇಖರ ಏತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ವಿಶ್ವವಿನೋದ ಬನಾರಿ ಉಪಸ್ಥಿತರಿದ್ದರು.


ಶ್ರೀ ಗೋಪಾಕೃಷ್ಣ ದೇವರ ಪೂಜೆಯೊಂದಿಗೆ ಆರಂಭವಾದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಚೆಂಡೆ ಮದ್ದಳೆ ಝೇಂಕಾರ, ಯಕ್ಷಗಾನ ಪತ್ರಿಕೋದ್ಯಮ ವಿಚಾರಗೋಷ್ಠಿ, `ಸೀತಾಪಹಾರ’ ಯಕ್ಷಗಾನ ತಾಳಮದ್ದಳೆ ಮತ್ತು `ಕುಶಲವ, `ಶ್ರೀಕೃಷ್ಣ ವಿಜಯ’ ಎಂಬ ಎರಡು ಯಕ್ಷಗಾನ ಬಯಲಾಟಗಳು ಪ್ರದರ್ಶನಗೊಂಡವು.

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ
50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ
ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ
April 24, 2025
9:47 PM
by: ದ ರೂರಲ್ ಮಿರರ್.ಕಾಂ
ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ
April 12, 2025
11:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group