ಬನಾರಿ ಯಕ್ಷಗಾನ ಕೇಂದ್ರದಲ್ಲಿ ತಾಳಮದ್ದಳೆ

January 1, 2020
11:41 AM

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂದಿರದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಸಂಜಯ ರಾಯಭಾರ ಯಕ್ಷಗಾನ ತಾಳಮದ್ದಳೆ ಜರಗಿತು.

Advertisement
Advertisement

ಬೆಂಗಳೂರಿನ ಶಂಭಯ್ಯ ಕೊಡಪಾಲ ಮತ್ತು ಮನೆಯವರ ಸೇವಾ ರೂಪವಾಗಿ ನಡೆಸಲ್ಪಟ್ಟ ಈ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಉಪಸ್ಥಿತಿಯಲ್ಲಿ ಸಂಘದ ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ, ಮಡ್ವ ಶಂಕರ ನಾರಾಯಣ ಭಟ್ ಮತ್ತು ನಿತೀಶ್ ಕುಮಾರ್ ಎಂಕಣ್ಣಮೂಲೆ ಸಹಕರಿಸಿದರು.

Advertisement

ಚೆಂಡೆ ಮದ್ದಳೆ ವಾದನದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದರು. ಅರ್ಥಧಾರಿಗಳಾಗಿ ನಾರಾಯಣ ಮಾಸ್ತರ್ ದೇಲಂಪಾಡಿ (ಕೌರವ) ರಾಮಣ್ಣ ಮಾಸ್ತರ್ ದೇಲಂಪಾಡಿ (ಗುರುಕೃಪರು) ಬಿ.ಯಚ್ ವೆಂಕಪ್ಪ ಗೌಡ (ಕರ್ಣ) ರಾಮನಾಯ್ಕ್ ದೇಲಂಪಾಡಿ(ಅಶ್ವತ್ಥಾಮ) ಡಿ.ವೆಂಕಟ್ರಮಣ ಮಾಸ್ತರ್ ದೇಲಂಪಾಡಿ (ಸಂಜಯ) ಯಂ. ಐತ್ತಪ್ಪ ಗೌಡ ಮುದಿಯಾರು(ಶ್ರೀಕೃಷ್ಣ) ವಿದ್ಯಾಭೂಷಣ ಪಂಜಾಜೆ(ಭೀಮ) ಗೋಪಾಲಕೃಷ್ಣ ರೈ ಮುದಿಯಾರು(ಅರ್ಜುನ) ಶೇಖರ ಪಾಟಾಳಿ ಕಲ್ಲರ್ಪೆ(ದ್ರೌಪದಿ) ತಮ್ಮ ಅರ್ಥಗಾರಿಕೆಯಲ್ಲಿ ಗಮನ ಸೆಳೆದರು. ಲತಾ ಆಚಾರ್ಯ ಬನಾರಿ ಸ್ವಾಗತಿಸಿ, ದಿವ್ಯಾನಂದ ಪೆಂರ್ದಲಪದವು ಧನ್ಯವಾದ ಸಮರ್ಪಣೆಗೈದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಹೆಚ್ಚಿನ ಉತ್ತೇಜನ | ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌
October 5, 2024
9:42 PM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |
October 5, 2024
9:04 PM
by: ದ ರೂರಲ್ ಮಿರರ್.ಕಾಂ
ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |
October 5, 2024
8:43 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |
October 5, 2024
8:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror