ಬಳ್ಪ ತ್ರಿಶೂಲಿನೀ ದೇವಸ್ಥಾನದ ಆಂಜನೇಯ ಮೂರ್ತಿಯಲ್ಲಿ ಕಂಡ ಅಚ್ಚರಿ ಏನು ಗೊತ್ತಾ ?

December 10, 2019
2:27 PM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಈಗ ಇನ್ನೊಂದು ಅಚ್ಚರಿ ಕಂಡಿದೆ. ಅತ್ಯಂತ ಪುರಾತನವಾದ ಸಂಪೂರ್ಣ ಶಿಲಾಮಯವಾದ ಹಾಗೂ ರಾಜ್ಯದಲ್ಲೇ ಅಪರೂಪ ಎನಿಸಿದ ತ್ರಿಶೂಲಿನೀ ದೇವಸ್ಥಾನದಲ್ಲಿ ಆಂಜನೇಯ ಪ್ರತಿಮೆ ಇದೆ. ಈ ಪ್ರತಿಮೆ ಬೆಳೆದಿದೆ, ಬೆಳೆಯುತ್ತಿದೆ. ಇದರ ವಿವರ ಇಲ್ಲಿದೆ..

Advertisement
Advertisement

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನವು ಅತ್ಯಂತ ಪುರಾತನವಾದ ಶಿಲಾಮಯ ದೇಗುಲ. ಚೋಳರು, ಕದಂಬರ ಕಾಲದಲ್ಲಿ ಈ ದೇವಸ್ಥಾನ ರಚನೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ಕಳೆದ ಎರಡು ವರ್ಷದ ಹಿಂದೆ ಜೀರ್ಣೋದ್ಧಾರಗೊಂಡು ಈಗ ಪೂಜೆ ನಡೆಯುತ್ತಿದೆ. ಇಲ್ಲಿ ತ್ರಿಶೂಲಕ್ಕೆ ಪೂಜೆ ನಡೆಯುವುದು ವಿಶೇಷತೆ. ಹೀಗಾಗಿ ದಕ್ಷಿಣ ಭಾರತದ ಶಕ್ತಿ ಪೀಠ ಎಂದು ನಂಬಲಾಗುತ್ತದೆ. ಇಲ್ಲಿ ನಡೆಸುವ ಪ್ರಾರ್ಥನೆಗಳಿಗೆ ವಿಶೇಷವಾದ ಫಲ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹಿಂದೆ ರಾಜರುಗಳು ಯಾವುದೇ ಕೆಲಸಕ್ಕೆ ಹೊರಡುವ ವೇಳೆ ಇಲ್ಲಿ  ಪ್ರಾರ್ಥನೆ ಸಲ್ಲಿಸಿ ತೆರಳುತ್ತಿದ್ದರು. ಹೀಗಾಗಿ ಇದೊಂದು ಶಕ್ತಿ ಪೀಠ ಎಂದೇ ಕರೆಯಲಾಗುತ್ತಿತ್ತು. ಇದೀಗ ಜೀರ್ಣೋದ್ಧಾರಗೊಂಡು ವಾರ್ಷಿಕ ಉತ್ಸವಗಳು ನಡೆಯುತ್ತಿದೆ.

ಅದರ ಜೊತೆಗೆ ಈಗ ವಿಶೇಷವೊಂದು ಇಲ್ಲಿ ನಡೆದಿದೆ. ದೇವಸ್ಥಾನವು ಸಂಪೂರ್ಣ ಶಿಲಾಮಯವಾಗಿದ್ದು ಸುತ್ತು ಪೌಳಿಯ ಹೊರ ಶಿಲೆಯಲ್ಲಿ  ಆಂಜನೇಯ ಪ್ರತಿಮೆ ಇದೆ. ಇದಕ್ಕೆ ಪೂಜೆಯೂ ನಡೆಯುತ್ತಿದೆ. ಈ ಪ್ರತಿಮೆ ಬೆಳೆಯುತ್ತಿದೆ.ಇದನ್ನು ಹತ್ತಿರದಿಂದ ಗಮನಿಸುವ ಹಾಗೂ ಪ್ರತೀ ದಿನವೂ ಪೂಜೆ ಮಾಡುವ ಶ್ರೀವತ್ಸ ಅವರು ಆಂಜನೇಯ ಪ್ರತಿಮೆ ಬೆಳೆಯುವ ಬಗ್ಗೆ ಮಾಹಿತಿ ನೀಡುತ್ತಾರೆ.  ಕಳೆದ ವರ್ಷ ಆಂಜನೇಯ ಪ್ರತಿಮೆಗೆ ಬೆಳ್ಳಿಯ ಕವಚ ಮಾಡಲಾಗಿತ್ತು. ದಾನಿಗಳು ಇದನ್ನು  ಸೇವಾ ರೂಪದಲ್ಲಿ ಸಲ್ಲಿಸಿದ್ದರು. ಇದೀಗ ಈ ಕವಚ ಅಳವಡಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀವತ್ಸ ಎಂ ವಿ. ಇದರ ಜೊತೆಗೆ ಈ ಹಿಂದೆ ಆಂಜನೇಯ ಪ್ರತಿಮೆಯ ಮೇಲೆ ಹೂವು ಇಡಲು ಸಾದ್ಯವಾಗುತ್ತಿರಲಿಲ್ಲ ಈಗ ಹೂವು ಇಡಲು ಸಾಧ್ಯವಾಗುತ್ತದೆ ಎಂದು ಶ್ರೀವತ್ಸ ವಿವರಣೆ ನೀಡುತ್ತಾರೆ. ಈ ಬಗ್ಗೆ ಹಿರಿಯರು ಹಾಗೂ ತಜ್ಞರೊಬ್ಬರ ಬಳಿ ಕೇಳಿದಾಗ  ಇದು ಬೆಳೆಯುವ ಆಂಜನೇಯ ಪ್ರತಿಮೆ ಎಂದು ಹೇಳಿದ್ದರು ಎಂದು  ವಿವರಣೆ ನೀಡುತ್ತಾರೆ ಶ್ರೀವತ್ಸ. ಈ ಹಿಂದೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ದುಂಬಿಯೊಂದು ಬಂದಿರುವುದು  ಹಾಗೂ ಮರುವರ್ಷ ಜಾತ್ರಾ ಉತ್ಸವದ ಸಂದರ್ಭವೂ ಅದೇ ಮಾದರಿ ದುಂಬಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರೆ, ದೇವಸ್ಥಾನ ಬ್ರಹ್ಮಕಲಶೋತ್ಸವದ ದಿನ ಫೋಟೊ ತೆಗೆದವರಿಗೂ ಗರ್ಭ ಗುಡಿಯಲ್ಲಿ  ತ್ರಿಶೂಲದ ಮಾದರಿಯ ಚಿತ್ರ ಗೋಚರಿಸಿತ್ತು. ಇದೀಗ ಆಂಜನೇಯ ಪ್ರತಿಮೆ ಬೆಳೆವಣಿಗೆ ಇಲ್ಲಿ ಇನ್ನೊಂದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

Advertisement

https://theruralmirror.com/?p=16076

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group