ಬಳ್ಪದಲ್ಲಿ ಹೆಚ್ಚಿದ ಚಿರತೆ ಕಾಟ : ಕರುವಿನ ಮೇಲೆ ಧಾಳಿ

July 30, 2019
5:47 PM

ಬಳ್ಪ: ಸುಳ್ಯ ತಾಲೂಕಿನ  ಬಳ್ಪ ಪರಿಸರದಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಎರಡು ತಿಂಗಳ ಹಿಂದಷ್ಟೇ ಹಟ್ಟಿಯಲ್ಲಿದ್ದ ದನದ ಮೇಲೆ ಧಾಳಿ ನಡೆಸಿ ಕೊಂದಿದ್ದ ಚಿರತೆ ಇದೀಗ ಇನ್ನೊಂದು ಕರುವಿನ ಮೇಲೆ ಧಾಳಿ ನಡೆಸಿ ಕೊಂದಿದೆ. ಹೀಗಾಗಿ ಜನತೆ ಭಯಗೊಂಡಿದ್ದಾರೆ.

ಬಳ್ಪ ಪರಿಸರದ ಕಾಡಂಚಿನ ಪ್ರದೇಶ ಹಾಗೂ ಎಣ್ಣೆಮಜಲು , ಏನೆಕಲ್ಲು , ಬಾನಡ್ಕ, ತುಂಭತ್ತಾಜೆ ಸೇರಿದಂತೆ ವಿವಿಧ ಕಡೆಗಳಲ್ಲಿ  ಚಿರತೆ ಹಾವಳಿ ಹೆಚ್ಚಾಗಿದೆ. ಮನೆಗಳಿಂದ ನಾಯಿಗಳನ್ನು ಹಿಡಿಯುತ್ತಿದ್ದ ಚಿರತೆ ಇದೀಗ ದನಗಳ ಮೇಲೂ ಧಾಳಿ ನಡೆಸಲು ಆರಂಭಿಸಿದೆ. ಎರಡು ತಿಂಗಳ ಹಿಂದೆ ಎಣ್ಣೆಮಜಲಿನಲ್ಲಿ  ಹಟ್ಟಿಗೇ ನುಗ್ಗಿದ್ದ ಚಿರತೆ ಇದೀಗ ಬಳ್ಪ ಪ್ರದೇಶದ ಮೂಡ್ನೂರು ಎಂಬಲ್ಲಿ ಕಾಡಿನ ಬದಿಯಲ್ಲಿ  ಸಂಚರಿಸುತ್ತಿದ್ದ  ಸ್ಥಳೀಯ ಕೃಷಿಕರೊಬ್ಬರ ಹೋರಿ ಕರುವಿನ ಮೇಲೆ ಚಿರತೆ ಧಾಳಿ ನಡೆಸಿ ಕೊಂದು ಹಾಕಿದೆ. ಇದೀಗ ಜನತೆಯ ಆತಂಕ ಹೆಚ್ಚಾಗಿದೆ. ತಕ್ಷಣವೇ ಚಿರತೆಯನ್ನು ಹಿಡಿದು ಜನತೆಯ ಭಯ ನಿವಾರಣೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror