ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು

October 19, 2019
5:44 PM

ಸುಳ್ಯ:ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ನಗರದ ಹಳೆಗೇಟು ಸಮೀಪ ಶನಿವಾರ ಸಂಜೆ ನಡೆದಿದೆ. ಹಳೆಗೇಟು ವಿದ್ಯಾನಗರದ ನಿವೃತ್ತ ಶಿಕ್ಷಕ ಹರಿಪ್ರಸಾದ್ ಅವರ ಪತ್ನಿ ನಿವೃತ್ತ ಶಿಕ್ಷಕಿ ಮೀನಾಕ್ಷಿ.ಕೆ‌.ಎ(66) ಮೃತಪಟ್ಟವರು.

ಹರಿಪ್ರಸಾದ್ ಮತ್ತು ಮೀನಾಕ್ಷಿ ಅವರು ಮುಖ್ಯ ರಸ್ತೆಯಲ್ಲಿ ರಿಕ್ಷಾ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಮೀನಾಕ್ಷಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಡೆಕೋಲಿನಲ್ಲಿ ಸಂಧಿಕರ ಮನೆಯಲ್ಲಿ ಪೂಜೆಗೆ ಹೋಗಿ ಹಿಂತಿರುಗಿ ಬಂದು ರಿಕ್ಷಾ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಹರಿಪ್ರಸಾದ್ ರಸ್ತೆ ದಾಟಿದ್ದರು. ಹಿಂದಿನಿಂದ ರಸ್ತೆ ದಾಟುತ್ತಿದ್ದ ಮೀನಾಕ್ಷಿ ಅವರಿಗೆ ಬಸ್ ಡಿಕ್ಕಿ ಹೊಡೆದಿದೆ. ಶಾಂತಿನಗರ, ಕೊಯಿಕುಳಿ‌, ಅಯ್ಯನಕಟ್ಟೆ ಸೇರಿ ಹಲವು ಕಡೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಮೀನಾಕ್ಷಿ ಅವರು ಆರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತಿ, ಮಕ್ಕಳಾದ ಶೋಭಾ, ಶ್ರೀರಂಜನಿ, ಗುರುರಾಜ್ ಅವರನ್ನು ಅಗಲಿದ್ದಾರೆ

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸುಳ್ಯ ಪೊಲೀಸರು ಪ್ರಕರಣ  ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror