ಬಾಂಜಾರು ಮಲೆ ಸಂಪರ್ಕಕ್ಕೆ ಸ್ಟೀಲ್ ಬ್ರಿಡ್ಜ್ : ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕು

August 19, 2019
11:00 AM

ಬೆಳ್ತಂಗಡಿ: ಪ್ರವಾಹಕ್ಕೆ ಸಿಕ್ಕಿ  ಕಡಿದು ಹೋಗಿದ್ದ ಸಂಪರ್ಕ ಸೇತು  ಕೆಲವೇ ದಿನದಲ್ಲಿ ತಾತ್ಕಾಲಿಕವಾಗಿ ಮರು ನಿರ್ಮಾಣಗೊಳ್ಳುವ ಮೂಲಕ ಬಾಂಜಾರು ಮಲೆ ನಿವಾಸಿಗಳಿಗೆ ಹೊರಪ್ರಪಂಚ ಕಾಣುವಂತಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹಾಗೂ ಭೂ ಕುಸಿತದಿಂದಾಗಿ ಅಪಾರ ಹಾನಿ ಸಂಭವಿಸಿ ತತ್ತರಿಸಿ ಹೋಗಿದ್ದ ಬೆಳ್ತಂಗಡಿಯ ಗ್ರಾಮಗಳು ಅತ್ಯಂತ ವೇಗವಾಗಿ ಚೇತರಿಸಿಕೊಳ್ಳುತ್ತಿದೆ. ಅದಕ್ಕೆ ಉದಾಹರಣೆ ಕುಕ್ಕಾವು ಸೇತುವೆ, ಹೊಸಮಠ ಸೇತುವೆ ಹಾಗೂ ಬಾಂಜಾರುಮಲೆಯ ಸ್ಟೀಲ್ ಬ್ರಿಡ್ಜ್. ತಿಂಗಳ ಕಾಲ ಸಂಪರ್ಕವಿಲ್ಲದೆ ಕೊರೆಯಬೇಕಾಗಿ ಬರಲಿದೆ ಎಂದು ಭಾವಿಸಿದ್ದ ಜನರಿಗೆ ಒಂದೇ ವಾರದಲ್ಲಿ ತಾತ್ಕಾಲಿಕ ಸೇತುವೆಗಳನ್ನು ನಿರ್ಮಿಸಿ ಬೆಳ್ತಂಗಡಿ ಮಾದರಿಯಾಗಿದೆ.

ಕಡಿದು ಹೋಗಿದ್ದ ದಿಡುಪೆಯ ಸೇತುವೆಯನ್ನು ಹಾಗೂ ಹೊಸಮಠ ಸೇತುವೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿ ವಾಹನ ಸಂಚಾರಕ್ಕೆ ಬಿಡಲಾಗಿದ್ದರೆ ಇಂದು ಬಾಂಜಾರು ಮಲೆಯಲ್ಲಿ ಕೊಚ್ಚಿ ಹೋಗಿದ್ದ ಸೇತುವೆಯ ಬದಲಾಗಿ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಕಾನನದ ನಡುವೆ ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕನ್ನು ನೀಡಲಾಗಿದೆ.
ಬಾಂಜಾರು ಮಲೆ ಮಲೆಕುಡಿಯರ ಕಾಲೊನಿಗೆ ಸಂಪರ್ಕ ಕಲ್ಪಿಸುವ ಸೇತುವೆ ಭಾರೀ ಮಳೆಗೆ ಕೊಚ್ಚಿ ಹೋಗಿತ್ತು ಇಲ್ಲಿನ ಸುಮಾರು 40 ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಹೊರ ಪ್ರಪಂಚದೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದರು ಕಳೆದ ಒಂದು ವಾರದಿಂದ ಈ ಜನರು ಆಹಾರಕ್ಕೂ ಪರದಾಡುವಂತಾಗಿತ್ತು. ತಾಲೂಕು ಆಡಳಿತವೇ ಇವರಿಗೆ ಆಹಾರವನ್ನು ಪೂರೈಸಿತ್ತು. ಇದೀಗ ಒಂದೇ ವಾರದಲ್ಲಿ ಬಾಂಜಾರು ಮಲೆಗೆ ವಾಕಿಂಗ್ ಸ್ಟೀಲ್ ಬ್ರಿಡ್ಜ್ ನಿರ್ಮಿಸಿ ಅವರಿಗೆ ಹೊರಪ್ರಪಂಚದೊಂದಿಗೆ ಸಂಪರ್ಕ ಸಾಧಿಸುವಂತಾಗಿದೆ.

ನಿರ್ಮಾಣಗೊಂಡಿರುವ ವಾಕಿಂಗ್ ಸ್ಟೀಲ್ ಬ್ರಿಡ್ಜ್ 42 ಅಡಿ ಉದ್ದವಿದ್ದು 4 ಅಡಿ ಅಗಲವಿದೆ. ನದಿಯಿಂದ 15 ಮೀಟರ್ ಎತ್ತರದಲ್ಲಿ ಸೇತುವೆಯಿದೆ. ಪುತ್ತೂರಿನ ಮಾಸ್ಟರ್ ಪ್ಲಾನರಿ ಸಂಸ್ಥೆಯವರು ಇದನ್ನು 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಮಂಗಳೂರಿನ ಕಾರ್ಯಪಾಲಕ ಇಂಜಿನಿಯರ್ ಯಶವಂತ್ ಹಾಗೂ ಬೆಳ್ತಂಗಡಿಯ ಕಾರ್ಯಪಾಲಕ ಇಂಜಿನಿಯರ್ ಶಿವಪ್ರಸಾದ್ ಅಜಿಲ ಅವರು ಉಸ್ತುವಾರಿ ವಹಿಸಿಕೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror