ಬಿಎಸ್ ವೈ ಸಚಿವ ಸಂಪುಟಕ್ಕೆ 10 ನೂತನ ಸಚಿವರ ಸೇರ್ಪಡೆ

February 6, 2020
1:19 PM

ಬೆಂಗಳೂರು: ಕರ್ನಾಟಕ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ವಿಸ್ತರಣೆಯಾಗಿದ್ದು, ಗುರುವಾರ ಬೆಳಗ್ಗೆ ಹತ್ತು ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ನೂತನ ಸಚಿವರಾದ ಎಸ್ ಟಿ ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಡಾ.ಕೆ.ಸುಧಾಕರ್ , ಭೈರತಿ ಬಸವರಾಜ್, ಅರಬೈಲ್ ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಕೆ.ಗೋಪಾಲಯ್ಯ, ನಾರಾಯಣ ಗೌಡ ಮತ್ತು ಶ್ರೀಮಂತ ಪಾಟೀಲ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೂತನ ಸಚಿವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕರು ಕಾಣಿಸಿಕೊಳ್ಳಲಿಲ್ಲ. ಹಲವು ಮಂದಿ ಬಿಜೆಪಿ ನಾಯಕರು ಸಮಾರಂಭದಲ್ಲಿ ಗೈರು ಹಾಜರಾಗಿದ್ದರು. ಮುಖ್ಯವಾಗಿ ಸಚಿವಾಕಾಂಕ್ಷಿಗಳಾಗಿದ್ದ ಸಿ.ಪಿ.ಯೋಗೇಶ್ವರ್, ಉಮೇಶ್ ಕತ್ತಿ , ಮುರುಗೇಶ್ ನಿರಾಣಿ ಗೈರು ಹಾಜರಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror