ಬಿದಿರಿನ ದೋಟಿ ಬಲು ಗಟ್ಟಿ……

May 31, 2020
1:49 PM

ಬಿದಿರು ಹುಲ್ಲಿನ ಗುಂಪಿಗೆ ಸೇರಿದ ಸಸ್ಯ. ವಂಶ, ವೇಣು, ಯುವಫಲ ಎಂದು ಸಂಸ್ಕೃತ ಭಾಷೆಯಲ್ಲಿ ಕರೆಸಿಕೊಳ್ಳುವ ಬಿದಿರು ರೈತ ಮಿತ್ರಕೂಡಾ ಹೌದು. ಜಗತ್ತಿನಲ್ಲಿ 550 ಕ್ಕೂ ಹೆಚ್ಚು ಪ್ರಭೇದಗಳಿವೆ. ನಮ್ಮ ದೇಶದಲ್ಲಿ ದೊರೆಯುವುದು ಕೇವಲ 130 ಜಾತಿಯ ಬಿದಿರುಗಳು ಅದರಲ್ಲೂ ಹೆಚ್ಚಾಗಿ ಸುಮಾರು 40 ವೆರೈಟಿಯ ಬಿದಿರುಗಳು ಕಾಣಸಿಗುತ್ತವೆ.

ದಶಕದ ಹಿಂದೆ ಕೃಷಿಕಾರ್ಯಗಳಿಗೆ ಸಲಕರಣೆಗಳಿಗಾಗಿ ರೈತರು ಅವಲಂಬಿಸುತ್ತಿದ್ದದ್ದು ಕಡಿಮೆ ವೆಚ್ಚದಲ್ಲಿ ಸುಲಭವಾಗಿ ದೊರೆಯುತ್ತಿದ್ದ ಬಿದಿರುಗಳನ್ನು ಅದರಲ್ಲೂ ಮುಖ್ಯವಾಗಿ ಅಡಿಕೆ, ತೆಂಗು, ಕೊಕ್ಕೋ, ಗೇರು ಮರಗಳಲ್ಲಿ ಬೆಳೆದ ಫಲಗಳನ್ನು ಕೀಳಲು ಅನಿವಾರ್ಯವಾದ ದೋಟಿ ತಯಾರಿಸಲು ಕೃಷಿಕರು ಮಾರು ಹೋಗುತ್ತಿದ್ದದ್ದು ಲೆಂಕಿರಿ ಎನ್ನುವ ಬಿದಿರಿಗೆ. ಆದರೆ ಇತ್ತೀಚಿನ ದಿನಗಳಲ್ಲಿ ಹಣಕೊಟ್ಟರೆ ಸುಲಭವಾಗಿ ದೊರೆಯುವ ಅಲ್ಯುಮೀನಿಯಂ ಪೋಲ್ ಬಂದ ನಂತರ ಬಿದಿರಿನ ದೋಟಿಗಳ(ದೋಟಿಗೆಕೊಕ್ಕೆ ಎಂದೂ ಹೆಸರಿದೆ) ಬಳಕೆ ಕಡಿಮೆಯಾಗುತ್ತಿದೆ. ಅದಲ್ಲದೆ ಬಿದಿರು ಒತ್ತೊತ್ತಾಗಿ ಬೆಳೆಯವ ಸಸ್ಯ. ದೋಟಿ ಮಾಡಲು ಅನುಕೂಲವಾದದ್ದನ್ನು ತುಂಡರಿಸಲು ಅದರ ಸುತ್ತಮುತ್ತಲಿರುವ ಅಡೆತಡೆಗಳನ್ನು ನಿವಾರಿಸಿ ತೆಗೆಯಬೇಕು. ಬಿದಿರನ್ನು ತುಂಡರಿಸಿ ತಂದು ಒಣಗಿಸಿ ದೋಟಿ ಮಾಡಲು ಸಮಯ ಜೊತೆಗೆ ತಾಳ್ಮೆಯೂ ಬೇಕು.

ಲೆಂಕಿರಿ ಬಿದಿರಿನ ವಿಶೇಷತೆ:  ಉದ್ದವಾಗಿ ಸಪೂರವಾಗಿ ಬೆಳೆಯುವ ಲೆಂಕಿರಿ ಬಿದಿರು ದೋಟಿ ತಯಾರಿಸಲು ತಕ್ಕದಾದದ್ದು. ಒಳಗಡೆ ಟೊಳ್ಳಾಗಿ ಇರುವುದರಿಂದ ಹಗುರವಾಗಿ ಆದರೆ ಅಷ್ಟೇ ಗಟ್ಟಿಯಾಗಿರುವುದು ಇದರ ಇನ್ನೊಂದು ವಿಶೇಷತೆ. ಫಲಗಳನ್ನು ಕೀಳಲು ಹಗುರವಾದ ದೋಟಿ ಬೇಕಾಗಿರುವುದರಿಂದ ಕೃಷಿಕರು ಹೆಚ್ಚಾಗಿ ಬಳಸುವುದು ಲೆಂಕಿರಿ ಬಿದಿರನ್ನು.ಈ ಜಾತಿಯ ಬಿದಿರುಗಳಲ್ಲಿ ಮುಳ್ಳುಗಳು ಇರುವುದಿಲ್ಲ. ಅಂಕುಡೊಂಕಾಗಿ ಇದ್ದರೂ ಹಸಿಯಾಗಿ ಇರುವಾಗ ನೆಲದ ಮೇಲೆ ಇಟ್ಟು ಭಾರವಾದ ಕಲ್ಲುಗಳನ್ನು ಇದರ ಮೇಲೆ ಇರಿಸುವುದರಿಂದ ಅಥವಾ ಮರಕ್ಕೆ ನೇರವಾಗಿ ಇಳಿಬಿಟ್ಟು ಕೆಳಗಡೆ ಭಾರವಾದಕಲ್ಲುಕಟ್ಟಿ ನೇರವಾಗುವಂತೆ ಮಾಡಬಹುದು.ಬಿದಿರುಒಣಗುವ ಮೊದಲೇಇದರ ಗೆಣ್ಣುಗಳನ್ನು ಸರಿಯಾಗಿ ತುಂಡರಿಸಬೇಕು. ನಂತರ ತೆಳ್ಳಗೆ ಇರುವ ತುದಿಗೆ ಕತ್ತಿಕಟ್ಟಿದರೆ ಮರಗಳಲ್ಲಿ ಬೆಳೆದ ಕಾಯಿಗಳನ್ನು ಕೀಳಲು ದೋಟಿ ತಯಾರಾಗುತ್ತದೆ. ನೀರು ತಾಕದ ಹಾಗೆ ಜತನದಿಂದ ಉಪಯೋಗಿಸಿದರೆ ಎರಡು – ಮೂರು ವರ್ಷಕ್ಕೆ ನಿರಾತಂಕವಾಗಿ ಬಳಸಬಹುದಾದ ಲೆಂಕಿರಿ ಬಿದಿರಿನ ದೋಟಿ ಬಲು ಗಟ್ಟಿ. ಇಲ್ಲವಾದರೆಒಂದೇ ವರ್ಷಕ್ಕೆ ಗೆದ್ದಲುಗಳಿಗೆ ಆಹಾರವಾದೀತು.

# ವಂದನಾರವಿ ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಯುವಶಕ್ತಿ ದಿಕ್ಕುತಪ್ಪದಿರಲು ಹಿರಿಯರ ಮಾರ್ಗದರ್ಶನವೇ ದೀಪಸ್ತಂಭ
March 13, 2026
7:02 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror