ಬಿಳಿಗೇರಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ

June 3, 2019
10:30 AM

ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror