ಬಿಳಿಗೇರಿ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ

June 3, 2019
10:30 AM

ಮಡಿಕೇರಿ : ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಸಾಲಿನ ಮಳೆಗಾಲದಲ್ಲಿ ರಸ್ತೆಯ ಅರ್ಧ ಭಾಗ ಕುಸಿದು ಬಿದ್ದು, ಕುಡಿಯುವ ನೀರಿನ ಬಾವಿ ಮುಚ್ಚಿ ಹೋಗಿತ್ತು. ಸ್ಥಳೀಯ ಮಂಡುವಂಡ ಕುಟುಂಬಸ್ಥರಿಗೆ ನೀರಿನ ಸಮಸ್ಯೆ ಎದುರಾಗಿರುವ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಶಾಸಕ ಬೋಪಯ್ಯ ಅವರು ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭ ತಾ.ಪಂ ಸದಸ್ಯೆ ಕುಮುದ, ಗ್ರಾ.ಪಂ. ಉಪಾಧ್ಯಕ್ಷ ಭೀಮಯ್ಯ, ಪ್ರಮುಖರಾದ ಕೋಡಿರ ಪ್ರಸನ್ನ, ಉಮೇಶ್ ಅಪ್ಪಣ್ಣ, ತಿಮ್ಮಯ್ಯ ಕಾವೇರಪ್ಪ, ಮೇದಪ್ಪ, ಕುಶಾಲಪ್ಪ, ಎಂ.ಬಿ.ಜೋಯಪ್ಪ, ಗ್ರಾ.ಪಂ. ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror