ಬುಧವಾರವೂ ನಮಗೆ ಶುಭವಾರ್ತೆ | ದಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ನೆಗೆಟಿವ್ ವರದಿ | ಉಡುಪಿ- ಕಾಸರಗೋಡಿನಲ್ಲೂ ಯಾವುದೇ ಪ್ರಕರಣವಿಲ್ಲ |

April 15, 2020
8:50 PM

ಮಂಗಳೂರು: ದ. ಕ. ಜಿಲ್ಲೆಯಲ್ಲಿ ಬುಧವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಹೀಗಾಗಿ ಸತತ 11 ದಿನಗಳಿಂದ ಕೊರೊನಾ ವೈರಸ್ ಹೊಸಪ್ರಕರಣಗಳು ಇಲ್ಲದೇ ಇರುವುದು ಜಿಲ್ಲೆಯ ಮಟ್ಟಿಗೆ ಶುಭವಾರ್ತೆ. ಈ ನಡುವೆ ಜಿಲ್ಲೆಯಲ್ಲಿ 12 ಜನ ಸೋಂಕಿತರಲ್ಲಿ 9 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಬುಧವಾರ ಸುಮಾರು 42 ಮಂದಿಯ ಪರೀಕ್ಷಾ ಮಾದರಿಗಳು ಲಭ್ಯವಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇನ್ನು ಇದೇ ದಿನ 15 ಮಂದಿಯನ್ನು ನಿಗಾದಲ್ಲಿರಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ 658 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರ ಪೈಕಿ 511 ಮಂದಿಯ ವರದಿ ಲಭ್ಯವಾಗಿದೆ. 498 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 25 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಬುಧವಾರದಂದು 22 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಕೇವಲ ಮೂವರು ಕೊರೊನಾ ಸೋಂಕಿತರಲ್ಲಿ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೊಬ್ಬರು ಚಿತ್ಸೆಯಲ್ಲಿದ್ದಾರೆ.

ರಾಜ್ಯದಲ್ಲಿ ಬುಧವಾರ ಒಂದೇ ದಿನವೇ ಒಟ್ಟು 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 279 ಸೋಂಕಿತರಲ್ಲಿ ಈಗಾಗಲೇ 80 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣ ವರದಿಯಾಗಿಲ್ಲ. ಈ ನಡುವೆ ಬುಧವಾರ ಇಡೀ ಕೇರಳದಲ್ಲಿ ಕೇವಲ ಒಂದೇ ಒಂದು ಪ್ರಕರಣ ದಾಖಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಇದುವರೆಗೆ 83 ಮಂದಿ ಗುಣಮುಖರಾಗಿದ್ದು, ಇನ್ನು 84 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror