ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ .ಯು.ಐ.ಉಸ್ತುವಾರಿಯಾಗಿ ಸಿ.ವಿ. ಆದಿಲ್ ಅಲಿ ಆಯ್ಕೆ

February 16, 2020
2:57 PM

ಸುಳ್ಯ: ದೆಹಲಿಯ ಎನ್.ಎಸ್.ಯು.ಐ ಸಂದರ್ಶನದಲ್ಲಿ ದೇಶಾದ್ಯಂತ ಆಯ್ದ 2500 ವಿದ್ಯಾರ್ಥಿ ನಾಯಕರಲ್ಲಿ 200 ವಿದ್ಯಾರ್ಥಿ ನಾಯಕರನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯಕ್ಕೆ ಎನ್.ಎಸ್.ಯು.ಐನ ಉಸ್ತುವಾರಿಯನ್ನಾಗಿ ಸಿ.ವಿ ಆದಿಲ್ ಅಲಿ ಇವರನ್ನು ರಾಷ್ಟೀಯ ಎನ್.ಎಸ್.ಯು.ಐ ಅಧ್ಯಕ್ಷ ನೀರಾಜ್ ಕುಂದನ್ ಆಯ್ಕೆ ಮಾಡಿರುತ್ತಾರೆ.

Advertisement
Advertisement

ಇವರು ಕಲ್ಲಿಕೋಟೆ ಸಿ.ವಿ.ರಾಫಿ ಹಾಗೂ ಅರಂತೋಡಿನ ರಾಜ್ಯ ನಾಯಕರಾದ ಟಿ.ಎಮ್ .ಶಹೀದ್ ತೆಕ್ಕಿಲ್ ರವರ ಸಹೋದರಿ ಟಿ.ಎಮ್ ಜಾಹಿರಾ ಬಿ ತೆಕ್ಕಿಲ್ ಇವರ ಪುತ್ರನಾಗಿದ್ದು ಅರಂತೋಡಿನಲ್ಲಿ ಹುಟ್ಟಿ ಬೆಳೆದ ಇವರು ಕ್ಯಾಲಿಕಟ್ ಲಾ ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿ ಆಗಿದ್ದಾರೆ. ಕಾನೂನು ವಿದ್ಯಾರ್ಥಿಯಾಗಿರುವಾಗಲೇ ಅನೇಕ ಜನಪರ ಹೋರಾಟ ಮಾಡಿದ್ದು ಗ್ರಾಹಕರ ವ್ಯಾಜ್ಯ ಪರಿಹಾರಕ್ಕಾಗಿ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿ ವಿಜಯವಾಗಿ ಕೇರಳ ರಾಜ್ಯಾದ್ಯಂತ ಹೆಸರು ವಾಸಿಯಾಗಿರುತ್ತಾರೆ. ಅಲ್ಲದೇ ಅಲಿಯಾ ಹಯಾರ್ ಸೆಕೆಂಡರಿ ಸ್ಕೂಲ್ ಕಾಸರಗೋಡಿನ ವಿದ್ಯಾರ್ಥಿ ನಾಯಕನಾಗಿ ನೆಹರು ಯುವ ಕೇಂದ್ರ ಕ್ಯಾಲಿಕಟ್ ಸದಸ್ಯನಾಗಿ ಕೇರಳ ರಾಜ್ಯದ ಯುತ್ ಕಮಿಷನ್ ಕ್ವಾಡಿನಟರಿರಾಗಿ ಕ್ಯಾಲಿಕಟ್ ಜಿಲ್ಲಾ ಕೆ.ಎಸ್.ಯು ನ ಕಾರ್ಯದರ್ಶಿಯಾಗಿ ಮತ್ತು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕರಾಗಿರುತ್ತಾರೆ. ಅಲ್ಲದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಪರವಾಗಿ ಕೆಲಸವನ್ನು ನಿರ್ವಹಿಸಿರುತ್ತಾರೆ .

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror