ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

October 3, 2019
7:53 PM

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Advertisement
Advertisement
Advertisement
Advertisement
Advertisement

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

Advertisement

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

Advertisement

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |
March 6, 2025
10:53 PM
by: ದ ರೂರಲ್ ಮಿರರ್.ಕಾಂ
ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ
ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು
March 6, 2025
9:35 PM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror