ಬೆಟ್ಟ ಕುಸಿಯುವ ಆತಂಕ : ವಿರಾಜಪೇಟೆ ರಸ್ತೆ ವಿಸ್ತರಣೆಗೆ ಆಕ್ಷೇಪ : ಸಾರ್ವಜನಿಕರಿಂದ ಪ್ರತಿಭಟನೆ

October 3, 2019
7:53 PM

ಮಡಿಕೇರಿ: ರಸ್ತೆ ವಿಸ್ತರಣೆಯ ನೆಪದಲ್ಲಿ ವಿರಾಜಪೇಟೆ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ಆರೋಪಿಸಿ ವಿವಿಧ ಬಡಾವಣೆಗಳ ಕಟ್ಟಡ ಮಾಲಕರು, ನಿವಾಸಿಗಳು, ವಕೀಲರು ಹಾಗೂ ವರ್ತಕರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಂಕದಕಟ್ಟೆಯಿಂದ ಮೀನುಪೇಟೆಯವರೆಗೆ ರಸ್ತೆ ವಿಸ್ತರಣೆಗೆ ಯೋಜನೆ ರೂಪಿಸಿರುವ ಪಟ್ಟಣ ಪಂಚಾಯತ್ ಅವೈಜ್ಞಾನಿಕ ಯೋಜನೆಯ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ತಾಲೂಕು ಕಚೇರಿ ಎದುರು ಆರೋಪಿಸಿದರು.  ಜುಲೈ ತಿಂಗಳಿನಲ್ಲಿ ರಸ್ತೆ ವಿಸ್ತರಣೆ ಸಂಬಂಧ ಸರ್ವೆ ಕಾರ್ಯ ನಡೆಸಿ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳು ಮುನ್ಸೂಚನೆ ನೀಡಿದ್ದರು. ಆದರೆ ಕಟ್ಟಡ ಮಾಲಕರುಗಳಿಗೆ ಸರಕಾರದ ನಿಯಮದಂತೆ ಪರಿಹಾರ ಒದಗಿಸುವ ಬಗ್ಗೆ ಎಲ್ಲೂ ಪ್ರಸ್ತಾಪಿಸಿಲ್ಲವೆಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.

ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ವೀರರಾಜೇಂದ್ರ ಪೇಟೆಯನ್ನು ಅಭಿವೃದ್ಧಿ ಹೆಸರಿನಲ್ಲಿ ಹದಗೆಡಿಸಲಾಗುತ್ತಿದೆ. ಮಲೆತಿರಿಕೆ ಬೆಟ್ಟವನ್ನು ಕೊರೆದು ರಸ್ತೆ ವಿಸ್ತರಣೆ ಮಾಡಿದರೆ ಮಣ್ಣು ಸಡಿಲಗೊಂಡು ಪೂರ್ಣ ಪ್ರಮಾಣದಲ್ಲಿ ಬೆಟ್ಟ ಕುಸಿದು ಪಟ್ಟಣವನ್ನು ಆವರಿಸುವ ಆತಂಕವಿದೆ ಎಂದು ಹಿರಿಯರಾದ ಡಾ.ಐ.ಅರ್.ದುರ್ಗಪ್ರಸಾದ್ ಗಮನ ಸೆಳೆದರು.

ಕಟ್ಟಡ ಮಾಲಕರಿಗೆ ಪರಿಹಾರ ನೀಡಿದ ನಂತರ ರಸ್ತೆ ವಿಸ್ತರಣೆ ಮಾಡಬೇಕೆನ್ನುವ ನಿಯಮವಿದೆ. ಆದರೆ ಪಟ್ಟಣ ಪಂಚಾಯತ್ ಅಧಿಕಾರಿಗಳು ಅದೇಶಗಳನ್ನು ಗಾಳಿಗೆ ತೂರಿ ರಸ್ತೆ ವಿಸ್ತರಣೆಗೆ ಮುಂದಾಗಿದ್ದಾರೆ ಎಂದು ವಕೀಲ ರವೀಂದ್ರಕಾಮತ್ ಆರೋಪಿಸಿದರು.  ವಕೀಲ ಟಿ.ಪಿ.ಕೃಷ್ಣ ಅವರು ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸಾರ್ವಜನಿಕರ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನಾ ಮೆರವಣಿಗೆ ತೆಲುಗರಬೀದಿ, ಮುಖ್ಯರಸ್ತೆಯ ಮೂಲಕ ಸಾಗಿ ಮೀನುಪೇಟೆಯಿಂದ ತಾಲೂಕು ಕಚೇರಿಯವರೆಗೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror