ಬೆಳ್ತಂಗಡಿಗೆ ಮುಖ್ಯಮಂತ್ರಿ‌ ಬಿ.ಎಸ್ ಯಡಿಯೂರಪ್ಪ ಭೇಟಿ

August 12, 2019
3:11 PM

ಬೆಳ್ತಂಗಡಿ: ತಾಲೂಕಿನ ಹಲವೆಡೆ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಹಾಗೂ ಕುಕ್ಕಾವು ಪಾಲನಾ ಕೇಂದ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಹದಲ್ಲಿ ಮನೆ ಸಂಪೂರ್ಣ ನಾಶವಾದ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು ರೂಪಾಯಿ 5 ಲಕ್ಷ, ಭಾಗಶಃ ನಾಶವಾದವರಿಗೆ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು ಮಾನ್ಯ ಮುಖ್ಯಮಂತ್ರಿಗಳು ಆದೇಶಿಸಿದರು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರುಗಳು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ವಿಧಾನಪರಿಷತ್ ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಧಿಕಾರಿ ವರ್ಗ ಮುಖ್ಯಮಂತ್ರಿಗಳ ಜೊತೆಗಿದ್ದರು.

ಅತೀ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror