ಬೆಳ್ಳಾರೆ ಸದಾಶಿವ ಶಿಶುಮಂದಿರದ ದಶಮಾನೋತ್ಸವ

May 29, 2019
10:30 AM

ಬೆಳ್ಳಾರೆ: ಜೀವನದಲ್ಲಿ ಬರುವ ಎಲ್ಲಾ ವಿಧದ ಸವಾಲುಗಳನ್ನು ಎದುರಿಸಲು ಸಿದ್ಧನಿರುವವನು ಜಗತ್ತಿನೆಲ್ಲೆಡೆ  ಬದುಕುವ ಸಾಮರ್ಥ್ಯ  ಹೊಂದುವನು ಎಂದು ವಿವೇಕಾನಂದ ಮಹಾವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲ ಡಾ| ಎಚ್.ಮಾಧವ ಭಟ್ ಹೇಳಿದರು.

Advertisement

ಅವರು ಬೆಳ್ಳಾರೆ ಶ್ರೀ ಸದಾಶಿವ ಶಿಶುಮಂದಿರದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರು ವಿಭಾಗದ ಗೋ ಸೇವಾ ಪ್ರಮುಖ್ ಪುಂಡರೀಕಾಕ್ಷ ಮಾತನಾಡಿ, ಸಮಾಜದೊಂದಿಗೆ ಇರಬೇಕಾದ ಶೈಲಿಯನ್ನು ಕಲಿತೊಕೊಳ್ಳಬೇಕು. ಹಿಂದು ಧರ್ಮದ ಸಂಸ್ಕೃತಿಯನ್ನು ಮಕ್ಕಳಿಗೆ ಪ್ರಥಮವಾಗಿ ಹೇಳಿಕೊಡಲೇಬೇಕು. ಅಂತಹ ಕೆಲಸಗಳನ್ನು ಶಿಶುಮಂದಿರಗಳು ಮಾಡುತ್ತಿರುವು ಶ್ಲಾಘನೀಯ ಎಂದರು.

ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಿ.ಎಸ್ ಚಿದಾನಂದ ರಾವ್ ಪುಸ್ತಕಗಳು ಮನುಷ್ಯನ ನಿಜವಾದ ಮಿತ್ರ. ವಿಷಯಗಳು ಪುಸ್ತಕದ ಮೂಲದಲ್ಲಿದ್ದರೆ ಜನರ ಮನಸ್ಸಿನಲ್ಲಿ ದೀರ್ಘ ಸಮಯ ಉಳಿದಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೈದಿಕ ಕ್ಷೇತ್ರದಲ್ಲಿ ಸಾಧನೆಗೈದಿರುವ ಚೂಂತಾರು ವೇ|ಮೂ ಶಿವಪ್ರಸಾದ್ ಭಟ್ ಹಾಗೂ ಜಿಲ್ಲಾ ಕೃಷಿ ಪಂಡಿತ ಪುರಸ್ಕೃತ ವಿವೇಕ್ ಆಳ್ವ ಅವರನ್ನು ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾದ ಶಶಿಕಿರಣ್ ಎಂಬವರಿಗೆ ಟ್ರಸ್ಟ್ ವತಿಯಿಂದ ಹನ್ನೊಂದು ಸಾವಿರ ರೂಪಾಯಿಗಳ ಸಹಾಯ ಧನ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ದಶಮಾನೋತ್ಸವ ಸಮಿತಿಯ ಅಧ್ಯಕ್ಷ  ಬಿ.ಸುಬ್ರಹ್ಮಣ್ಯ ಜೋಶಿ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್‍ಕುಮಾರ್ ರೈ ಪುಡ್ಕಜೆ, ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಉಪಸ್ಥಿತರಿದ್ದರು. ಕೇಶವಮೂರ್ತಿ ಕಾವಿನಮೂಲೆ ವಂದಿಸಿದರು.  ತೇಜೇಶ್ವರಿ ವಾರ್ಷಿಕ ವರದಿ ವಾಚಿಸಿದರು. ಪ್ರದೀಪ್‍ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror