ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ಸದನ ನಿರ್ಮಿಸಲು ಶಾಸಕರಿಗೆ ಮನವಿ

September 16, 2019
5:00 PM

ಬೆಳ್ಳಾರೆ: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳವಾಗಿದ್ದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಅಮರ ಸುಳ್ಯ ಸ್ವಾತಂತ್ರ್ಯ ಸದನ ನಿರ್ಮಾಣವಾಗಬೇಕು ಎಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ವತಿಯಿಂದ ಸುಳ್ಯ ಶಾಸಕ ಎಸ್ ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಕೊರಗಪ್ಪ ನಾಯ್ಕ ಕುರುಂಬುಡೇಲು ಶಾಸಕರಿಗೆ ಮನವಿ ಪತ್ರ ನೀಡಿದರು. ಪೂರ್ವಾಧ್ಯಕ್ಷರುಗಳಾದ ಚಂದ್ರಶೇಖರ ಪನ್ನೆ, ಪದ್ಮನಾಭ ಬೀಡು, ಆನಂದ ಗೌಡ ಪಡ್ಪು, ಕಾರ್ಯದರ್ಶಿ ಸಂಜಯ ನೆಟ್ಟಾರು, ಸದಸ್ಯರುಗಳಾದ ಶಿವರಾಮ ನಾಯಕ್ ಪನ್ನೆ, ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ, ಜಯಂತ ಪೂಜಾರಿ ಕಾವಿನ ಮೂಲೆ, ಸತೀಶ್ ಕುಮಾರ್ ಕಿಲಂಗೋಡಿ ಉಪಸ್ಥಿತರಿದ್ದರು.

ಬೆಳ್ಳಾರೆ ಕೋಟೆಯಲ್ಲಿ ಒಂದು ಅಮರ ಸುಳ್ಯ ಸ್ವಾತಂತ್ರ್ಯ ಭವನ ನಿರ್ಮಾಣವಾಗಬೇಕು. ಆ ಭವನದಲ್ಲಿ 1837ರ ಬಂಡಾಯದಲ್ಲಿ ಪಾಲ್ಗೊಂಡ ಹಿರಿಯರ ಬಗೆಗಿನ ದಾಖಲೆಗಳು, ಆಗ ಬಳಸಲಾದ ಕತ್ತಿ, ಕೋವಿ ಮತ್ತು ಇತರ ಆಯುಧಗಳು, ರೈತ ಸಂಗ್ರಾಮದ ಬಗ್ಗೆ ಹೊರಬಂದಿರುವ ಎನ್. ಎಸ್. ದೇವಿಪ್ರಸಾದರ ಅಮರ ಸುಳ್ಯದ ಸ್ವಾತಂತ್ರ್ಯ ಸಮರ, ನಿರಂಜನರ ಕಲ್ಯಾಣ ಸ್ವಾಮಿ ಮತ್ತು ಅಪರಂಪಾರ, ಡಾ. ಪ್ರಭಾಕರ ಶಿಶಿಲರ ಮೂಡಣದ ಕೆಂಪು ಕಿರಣ ಮತ್ತು ಅಮರ ಕ್ರಾಂತಿ ವೀರರು, ವಿದ್ಯಾಧರ ಬಡ್ಡಡ್ಕ ಅವರ ಕೆದಂಬಾಡಿ ರಾಮಗೌಡ, ಪಾಲ್ತಾಡಿ ರಾಮಕೃಷ್ಣ ಆಚಾರ್‍ರ ಸ್ವಾತಂತ್ರ್ಯ ಯೋಧ ಕೆದಂಬಾಡಿ ರಾಮ ಗೌಡ, ಡಾ. ಪ್ರತಿಮಾ ಜಯರಾಂರ 1837ರ ಕೊಡಗು ಕೆನರಾ ಬಂಡಾಯ ಎಂಬಿತ್ಯಾದಿ ಕೃತಿಗಳಲ್ಲದೆ ಭಾರತದ ಸ್ವಾತಂತ್ರ್ಯ ಹೋರಾಟದ ಗಾಂಧೀ, ನೆಹರೂ, ಸುಭಾಶ್ಚಂದ್ರ ಭೋಸ್, ವಲ್ಲಭಬಾಯಿ ಪಟೇಲರಂತಹ ದೇಶ ಭಕ್ತರ ಬಗೆಗಿನ ಕೃತಿಗಳು ಓದುಗರಿಗೆ ಲಭ್ಯವಾಗುವಂತೆ ಮಾಡುವ ಗ್ರಂಥಾಲಯವೊಂದು ನಿರ್ಮಾಣವಾಗಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸ್ವಾತಂತ್ರ್ಯ ಸಮರದ ವಿವರದ ಕೆಲವು ದಾಖಲೆಗಳನ್ನು ಮತ್ತು ಅಮರಕ್ರಾಂತಿ ಸ್ವಾತಂತ್ರ್ಯ ಭವನದ ನಿರ್ಮಾಣ ವೆಚ್ಚದ ನೀಲಿ ನಕಾಶೆಯೊಂದನ್ನು ಪತ್ರದೊಂದಿಗೆ ನೀಡಲಾಯಿತು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group