ಬೇಸಗೆಯಲ್ಲೂ ಗುಡ್ಡದ ಅಡಿಕೆ ತೋಟಕ್ಕೆ ನೀರುಣಿಸದೇ ಹಸಿರು ಹಸಿರು…!

May 29, 2019
8:00 AM

ಒಂದಲ್ಲ, ಎರಡು ತಿಂಗಳು ಅಲ್ಲ. ಇಡೀ ಬೇಸಗೆಯಲ್ಲಿ ಅಡಿಕೆ ತೋಟಕ್ಕೆ ನೀರೇ ಹಾಕದೇ ಇದ್ದರೆ ಏನಾದೀತು ? ಎಲ್ಲರ ಉತ್ತರ ಒಂದೇ ಕರಟಿ ಸಾಯಬಹುದು. ಆದರೆ ನಿಮ್ಮ ವಾದ ತಪ್ಪಾದೀತು. ಇಲ್ಲೊಂದು ಅಡಿಕೆ ತೋಟಕ್ಕೆ ನೀರೇ ಹಾಕುವುದಿಲ್ಲ. ಅದೂ ಗುಡ್ಡದ ತೋಟ…!.  ಮಳೆಗಾಲದಲ್ಲಿ ಮಾತ್ರಾ ಅಡಿಕೆ ಮರಕ್ಕೆ ನೀರು ಸಿಗುತ್ತದೆ. ಬೇಸಗೆಯಲ್ಲಿ ಒಂದು ತೊಟ್ಟು ನೀರು ಸಿಗುವುದೇ ಇಲ್ಲ. ಹಾಗಿದ್ದರೂ ಈ ತೋಟ ಹಸಿರಾಗಿದೆ, ಫಸಲೂ ಇದೆ..!.

Advertisement
Advertisement

 

 

ಬೇಸಗೆಯ ಈ ಕಾಲದಲ್ಲಿ ನೀರಿಲ್ಲದೆ ಅನೇಕ ತೋಟಗಳು ಕರಟಿದವು. ಇನ್ನೂ ಅನೇಕ ತೋಟಗಳಲ್ಲಿ  ನೀರಿನ ಕೊರತೆಯಾಗಿ ಹಿಂಗಾರ ಕರಟಿತು. ಇನ್ನೂ ಹಲವು ತೋಟಗಳಲ್ಲಿ  ನಳ್ಳಿ ಉದುರಿದವು. ಒಂದು ದಿನ ನೀರುಣಿಸುವುದು ಕಷ್ಟವಾದರೂ ತೋಟದ ಹುಲ್ಲು ಬಾಡುತ್ತದೆ, ಅಡಿಕೆ ಮರಕ್ಕೆ, ಗಿಡಕ್ಕೆ ಸಮಸ್ಯೆಯಾಗುತ್ತದೆ. ಅಂತಹದ್ದರಲ್ಲಿ “ ಇಲ್ಲೊಂದು ಗುಡ್ಡದ ತೋಟಕ್ಕೆ ನೀರೇ ಹಾಕುವುದಿಲ್ಲ ” ಎಂಬ ಮಾಹಿತಿ ಬಂದಾಗ ನಂಬುವುದು  ಕಷ್ಟ. ಆ ತೋಟಕ್ಕೆ ಹೋದರೂ ಹತ್ತಾರು ಪ್ರಶ್ನೆಗಳು, ಸಂದೇಹ ವ್ಯಕ್ತಪಡಿಸಿ ಅಕ್ಕಪಕ್ಕದ ಮನೆಯವರಲ್ಲೂ ವಿಚಾರಿಸಿದಾಗಲೂ ಬಂದ ಉತ್ತರ ನೀರೇ ಹಾಕುವುದಿಲ್ಲ ಈ ತೋಟಕ್ಕೆ…!. ಹಾಗಿದ್ದರೆ ಏನು ಟ್ರಿಕ್ಸ್ ಇರಬಹುದು ?

Advertisement

 

 

ಇದು ಕಡಬ ತಾಲೂಕಿನ ಬಳ್ಪ ಗ್ರಾಮದಲ್ಲಿರುವ ತೋಟ. ಬಳ್ಪ ಪೇಟೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರ. ಆಲ್ಕಬೆ ಎಂಬಲ್ಲಿನ ಚಂದ್ರಶೇಖರ ಎಂಬವರು ತೋಟ ಇದು. ಆಲ್ಕಬೆ ಹೊನ್ನಪ್ಪ ಗೌಡ ಎಂಬವರ ಮಗನಾದ ಇವರು ಕೃಷಿಯ ಜೊತೆಗೆ ಸೆಂಟ್ರಿಂಗ್ ಕೆಲಸ ಮಾಡುತ್ತಾರೆ. ಸುಮಾರು 270 ಅಡಿಕೆ ಮರ ಇದೆ ಇವರಿಗೆ. ಕಳೆದ 20 ವರ್ಷಗಳಿಂದ ಇವರ ತಂದೆ ಹೊನ್ನಪ್ಪ ಗೌಡ ಹಾಗೂ ಚಂದ್ರಶೇಖರ ಸೇರಿ ಕೃಷಿ ಮಾಡುತ್ತಿದ್ದಾರೆ.  ಇಷ್ಟೂ ವರ್ಷದಿಂದ ಈ ತೋಟಕ್ಕೆ ಬೇಸಗೆಯಲ್ಲಿ  ನೀರು ಹಾಕುತ್ತಿಲ್ಲ.

 

Advertisement

 

 

ಸಂಪೂರ್ಣ ಸಾವಯವ ಕೃಷಿ ಇವರದು. ಅಡಿಕೆ ಮರಕ್ಕೆ ಹಟ್ಟಿ ಗೊಬ್ಬರ ಹಾಕುತ್ತಾರೆ. ಅದರ ಜೊತೆಗೆ ಬೂದಿ ಸಾಧ್ಯವಾದಷ್ಟು ಹಾಕುತ್ತಾರೆ. ರಾಸಾಯನಿಕ ಗೊಬ್ಬರನ್ನು  ಬಳಕೆ ಮಾಡುತ್ತಿಲ್ಲ. ಆದರೆ ಸುಮಾರು ಫೆಬ್ರವರಿ , ಮಾರ್ಚ್ ಹೊತ್ತಿಗೆ ಪ್ರತೀ ಬಾರಿ ಅಡಿಕೆ ಮರದ ಬುಡಕ್ಕೆ ಸುಮಾರು ಅರ್ಧ  ಕೆಜಿಯಷ್ಟು ಉಪ್ಪು ಹಾಕುತ್ತಾರೆ. ಬೇಸಗೆಯಲ್ಲಿ  ಅಡಿಕೆ ಮರದ  ಬುಡದ ತುಂಬಾ ಸೊಪ್ಪು, ಸೋಗೆ, ಹಟ್ಟಿಗೊಬ್ಬರ ಇಡುತ್ತಾರೆ.  ಇದಿಷ್ಟೇ ಇವರ ಕೃಷಿಯ ಗುಟ್ಟು. ಕಳೆದ ವರ್ಷ ಸುಮಾರು 25 ಚೀಲ ಅಡಿಕೆ ಆಗಿದೆ ಎನ್ನುವ ಚಂದ್ರಶೇಖರ್ ಕೃಷಿಯ ಜೊತೆಗೆ ಕಾಳುಮೆಣಸು ಬಳ್ಳಿಯೂ ಇದೆ. ಆದರೆ ನೀರಿನ ಕೊರತೆ ಹಾಗೂ ಉಪ್ಪು ಹಾಕಿದಾಗ ಸಾಯುತ್ತದೆ ಎಂದು ಹೇಳುತ್ತಾರೆ. ಆದರೆ ಕಾಳುಮೆಣಸಿಗೆಂದೇ ಪ್ರತ್ಯೇಕ ವ್ಯವಸ್ಥೆ  ಏನೂ ಮಾಡುತ್ತಿಲ್ಲ ಎಂದು ವಿವರಣೆ ನೀಡುತ್ತಾರೆ.

Advertisement

 

 

ಆದರೆ ನೀರೇ ಇಲ್ಲದೆ ಹೇಗೆ ಇಲ್ಲಿ ಅಡಿಕೆ ಬೆಳೆಯುತ್ತದೆ ಎಂಬುದರ ಬಗ್ಗೆ ಕೃಷಿಕ ಕೃಷ್ಣಪ್ರಸಾದ್ ಕರ್ಮಜೆ ಹೀಗೆ ಅಭಿಪ್ರಾಯ ಪಡುತ್ತಾರೆ, ಗುಡ್ಡದಲ್ಲಿರುವ ಈ ತೋಟದ ಮಣ್ಣಿನ ತರಗತಿ, ಗುಣಮಟ್ಟವೂ ಕಾರಣ ಇರುವುದು. ಅದರ ಜೊತೆಗೆ ಪ್ರತೀ ವರ್ಷ ಉಪ್ಪು ಸುರಿಯುವುದರಿಂದ ಯಾವುದೇ ಪ್ರಯೋಜನ ಆಗುತ್ತದೆ ಎನ್ನುತ್ತಾರೆ. ಇಲ್ಲಿನ ತೋಟದ ಫಲಸು ಕೂಡಾ ಕಡಿಮೆ ಏನೂ ಆಗಿಲ್ಲ. ಆಸುಪಾಸಿನ ನೀರು ಹಾಕುವ ತೋಟದಷ್ಟೇ ಇದೆ ಎನ್ನುತ್ತಾರೆ ಕೃಷ್ಣಪ್ರಸಾದ್.

ಹೀಗಾಗಿ ಇಂತಹದ್ದೊಂದು ಕೃಷಿ ಪ್ರಯೋಗ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಮಾಡಿದ್ದಾರೆ ಚಂದ್ರಶೇಖರ್ ಕುಟುಂಬ. ಇದೊಂದು ಅಧ್ಯಯನಕ್ಕೆ ಹಾಗೂ ಮಾಹಿತಿಯ ವಿಷಯವಾಗುತ್ತದೆ. ನೀರುಣಿಸದೇ ಹಸಿರಾಗಿರುವ ಕಾರಣ ಏನು ?. ಅಲ್ಲೇ ಪಕ್ಕದ ತೋಟ ನೀರುಣಿಸಿದರೂ ಕರಟಿದೆ. ಗುಡ್ಡದ ಕೆಳಭಾಗದ ತೋಟ ಒಣಗಿದೆ. ಹಾಗಿದ್ದರೆ ಇದ್ಯಾಕೆ ಹೀಗೆ ?

Advertisement

 

 

 

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
July 23, 2025
2:26 PM
by: The Rural Mirror ಸುದ್ದಿಜಾಲ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ

ಪ್ರಮುಖ ಸುದ್ದಿ

MIRROR FOCUS

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
July 23, 2025
2:26 PM
by: The Rural Mirror ಸುದ್ದಿಜಾಲ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

Editorial pick

 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |
July 23, 2025
10:05 PM
by: The Rural Mirror ಸುದ್ದಿಜಾಲ
ಸಾಮಾನ್ಯ ಜನರ ಗ್ರಹಿಕೆಗೆ ಸಿಲುಕದ ವಿದ್ಯಮಾನಗಳು
July 23, 2025
8:56 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!
July 23, 2025
3:57 PM
by: ಸಾಯಿಶೇಖರ್ ಕರಿಕಳ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
July 23, 2025
2:26 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |
July 23, 2025
7:03 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group