ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ತಂತ್ರಿಗಳ ಭೇಟಿ

October 19, 2019
3:23 PM

ಬೆಳ್ಳಾರೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಸಪರಿವಾರ ದೇವಸ್ಥಾನದಲ್ಲಿ ಜನವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಲುವಾಗಿ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ನೀಲೇಶ್ವರ ದಾಮೋದರ ತಂತ್ರಿಗಳ ಭೇಟಿ ಮಾಡಿದರು.

ಸಮಿತಿ ವತಿಯಿಂದ ತಂತ್ರಿಗಳೊಂದಿಗೆ ಬ್ರಹ್ಮಕಲಶೋತ್ಸವದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ದೈವಜ್ಞರು ಸೂಚಿಸಿದಂತೆ ಹಾಗು ತಂತ್ರಿಗಳ ಮಾರ್ಗದರ್ಶನದಂತೆ ಜ.26ಕ್ಕೆ ತಂಟೆಪ್ಪಾಡಿಯ ಶಿರಾಡಿ ದೈವಸ್ಥಾನ, ನಾಗನಕಟ್ಟೆ, ಬಾಳಿಲ ಬಳಿಯ ನೆಟ್ಟಾರಿನ ನಾಗನಕಟ್ಟೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಜ.27ರಂದು ಶ್ರೀ ಇಷ್ಟದೇವತಾ ಉಳ್ಳಾಕುಳು ಹಾಗು ಕಲ್ಲಮಾಡದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಜ.28ರಿಂದ ಜ.30ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದೆ.

ದೇವಳದ ಮೊಕ್ತೇಸರ ಬಾಳಿಲ ರಾಮಚಂದ್ರ ರಾವ್, ಸುಬ್ರಹ್ಮಣ್ಯ ಮುಂಡುಗಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಪ್ರಧಾನ ಕಾರ್ಯದರ್ಶಿ ಪಿಜಿಎಸ್‍ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಪ್ರೀತೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror