ಭಾರತವು ವಿಶ್ವಗುರುವಾಗಲು 4ಜಿ ಬಲಿಷ್ಠವಾಗಬೇಕು

February 9, 2020
4:00 PM
ಮಂಗಳೂರು: ಭಾರತವು ಅನಾದಿ ಕಾಲದಲ್ಲಿ ವಿಶ್ವಗುರುವಾಗಿತ್ತು‌.ಆಗ ಗೋವು, ಗ್ರಾಮ, ಗುರುಕುಲ,ಗಂಗೆ ಎಂಬ 4ಜಿ ಬಲಿಷ್ಠವಾಗಿತ್ತು. ಪ್ರತಿಯೊಂದು ಗ್ರಾಮವು ಸ್ವಾವಲಂಬಿಯಾಗಿತ್ತು ಮತ್ತು ಜನರು ಸುಖೀಗಳಾಗಿದ್ದರು‌.ಗಂಗೆ ಶುಧ್ದವಾಗಿತ್ತು, ಗುರುಕುಲ ವ್ಯವಸ್ಥೆಯಿಂದ ಉಚ್ಛ ಮಟ್ಟದ ಶಿಕ್ಷಣ ನೀಡಲಾಗುತ್ತಿತ್ತು, ಅಸಂಖ್ಯಾತ ಗೋವುಗಳಿದ್ದು ಸಂಪತ್ತು ಸಮೃದ್ಧವಾಗಿತ್ತು‌, ಆದರೆ ಇಂದು ಗೋ ಹತ್ಯೆಯಿಂದಾಗಿ ಗೋ ಸಂತತಿ ನಾಶವಾಗುತ್ತಿದೆ. ಮತ್ತೊಮ್ಮೆ ಭಾರತ ವಿಶ್ವಗುರುವಾಗಬೇಕಾದರೆ ಈ 4ಜಿ ಅಂಶಗಳು ಬಲಿಷ್ಠವಾಗಬೇಕು” ಎಂದು ನ್ಯಾಯವಾದಿ ಚಂದ್ರಶೇಖರ್ ರಾವ್ ಹೇಳಿದರು.
ಅವರು ಮಂಗಳೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ  ನಡೆಯುತ್ತಿರುವ  ಹಿಂದೂ ರಾಷ್ಟ್ರಅಧಿವೇಶನದ ಮೊದಲ ದಿನದ ಗೋಷ್ಟಿಯಲ್ಲಿ ಮಾತನಾಡಿದರು.
 ಶ್ರೀ ರಾಮಚಂದ್ರಾಪುರ ಮಠದ ವಿದ್ಯಾಲಕ್ಮೀ ಮಾತನಾಡಿ ಸನಾತನ ಹಿಂದೂ ಧರ್ಮವೆಂದರೆ ಅವಿನಾಶಿ ಮತ್ತು ಅಜರಾಮರವೇ ಆಗಿದೆ. ಹಿಂದೂ ಧರ್ಮವು ಜೀವನದ ಅಂಗವಾಗಿದೆ.ಹಿಂದೂ ಧರ್ಮವು ಎಲ್ಲಾ ಜೀವಿಗಳಲ್ಲಿಯೂ ದೇವರನ್ನು ಕಾಣುವ ಅತ್ಯಂತ ಶ್ರೇಷ್ಠ ಧರ್ಮವಾಗಿದೆ‌.ಇಂದು ಇಂದಿನ ಪೀಳಿಗೆಗೆ ಧರ್ಮಶಿಕ್ಷಣವನ್ನು ನೀಡಬೇಕಾಗಿದೆ ಉಡುಪುಗಳಾಗಿರಲಿ, ಉತ್ಸವಗಳಾಗಿರಲಿ ಪಾಶ್ಚಾತ್ಯರಂತೆ ಅಲ್ಲ ಹಿಂದೂ ಧರ್ಮದಂತೆ ಆಚರಿಸಿ ಧರ್ಮದ ರಕ್ಷಣೆಯನ್ನು ಮಾಡಬೇಕಾಗಿದೆ ಎಂದರು.
ಬಂಟರ ಸಂಘದ ಆಶಾಜ್ಯೋತಿ ರೈ ಮಾತನಾಡಿ  ಪ್ರಸ್ತುತ ಹಿಂದೂ ಧರ್ಮವು ಜಾತಿ ಎಂದು ವಿಭಜನೆ ಹೊಂದಿದೆ.ಆದರೆ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಜಾತಿ ಎಂಬ ಬಂಧನವನ್ನು ತೆಗೆದು ಕೇವಲ ‘ಹಿಂದೂ’ ಎಂದು ಒಂದಾಗಬೇಕಾಗಿದೆ..ಹಿಂದೂ ಐಕ್ಯತೆ ಹೊಂದಬೇಕಾಗಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror