ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ಪದಾಧಿಕಾರಿಗಳ ಪದಗ್ರಹಣ

November 3, 2019
10:20 PM

ಸುಳ್ಯ: ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಸುಳ್ಯ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

Advertisement

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕರಿಗನೂರು ಪದಗ್ರಹಣ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿದ್ದರು. ನೂತನ ಅಧ್ಯಕ್ಷ ಡಾ.ಬಿ.ಎನ್.ಶ್ರೀಕೃಷ್ಣ ನೇತೃತ್ವದ 2019-20ನೇ ಸಾಲಿನ ಪದಾಧಿಕಾರಿಗಳು ಅಧಿಕಾರ ವಹಿಸಿದರು. ನಿರ್ಗಮನ ಅಧ್ಯಕ್ಷೆ ಡಾ.ಗೀತಾ ದೊಪ್ಪ ಅಧಿಕಾರ ಹಸ್ತಾಂತರಿಸಿದರು.

ನೂತನ ಕಾರ್ಯದರ್ಶಿ ಡಾ. ರವಿಶಂಕರ್ ಎಸ್ ಹಾಗು ಖಜಾಂಜಿ ಡಾ. ಗಣೇಶ್.ಕೆ.ಕೆ, ಅವರಿಗೆ ನಿರ್ಗಮನ ಕಾರ್ಯದರ್ಶಿ ಡಾ. ಭರತ್ ಶೆಟ್ಟಿ ಮತ್ತು ಖಜಾಂಜಿ ಡಾ. ಅಮಿತ್ ಕುಮಾರ್ ಅಧಿಕಾರ ಹಸ್ತಾಂತರಿಸಿದರು. ರಾಜ್ಯಾಧ್ಯಕ್ಷ ಡಾ. ಮಧುಸೂದನ ಪ್ರಮಾಣ ವಚನ ಬೋಧಿಸಿದರು. ಡಾ.ಗೀತಾ ದೊಪ್ಪ ಸ್ವಾಗತಿಸಿದರು. ಡಾ. ಲಾಲಿತ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror